Connect with us

ನಿಮ್ಮ ಜಿಲ್ಲೆ

‘ವಿಪಕ್ಷಗಳ ಮಹಾಘಟಬಂಧನ ಭ್ರಮೆ, ಮತ್ತೆ ಅಧಿಕಾರಕ್ಕೆ ಬರೋದು ಬಿಜೆಪಿಯೇ!’

Published

on

ಮುಂಬೈ, ಡಿಸೆಂಬರ್ 19: ವಿಪಕ್ಷಗಳ ಮಹಾಘಟಬಂಧನ ಒಂದು ಭ್ರಮೆಯಷ್ಟೇ. 2019 ರಲ್ಲಿ ಮತ್ತೆ ಗೆಲ್ಲುವವರು ನಾವೇ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ. ಮುಂಬೈಯಲ್ಲಿ ನಡೆದ ರಿಪಬ್ಲಿಕ್ ಸಮಿಟ್ ನಲ್ಲಿ ಮಾತನಾಡುತ್ತಿದ್ದ ಅವರು, 2019 ರ ಲೋಕಸಭಾ ಚುನಾವಣೆಯಲ್ಲೂ ಶಿವಸೇನೆ ಬಿಜೆಪಿಯೊಂದಿಗಿರುತ್ತದೆ ಎಂದರು.

ಮೂರು ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಸೋತ ನಂತರ ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡದಿದ್ದ ಅಮಿತ್ ಶಾ ಇದೀಗ ಜನತೆಯ ತೀರ್ಪಿಗೆ ತಲೆಬಾಗುತ್ತೇವೆ ಎಂದರು. ಛತ್ತೀಸ್ ಗಢ, ರಾಜಸ್ಥಾನ ಮತ್ತು ಮಧ್ಯಪ್ರದೇಶದ ಚುನಾವಣೆಗಳು 2019 ರ ಚುನಾವಣೆಯ ಮೇಲೆ ಪರಿಣಾಮ ಬೀರುತ್ತದೆ ಎಂಬ ಹೇಳಿಕೆ ತಪ್ಪು, ರಾಜ್ಯಗಳ ಚುನಾವಣೆ ನಡೆದಿದ್ದೇ ಬೇರೆಯ ವಿಷಯಗಳನ್ನು ಕೇಂದ್ರೀಕರಿಸಿ. ಆದರೆ ಲೋಕಸಭಾ ಚುನಾವಣೆಯ ಗಮನವಿರುವುದೇ ಬೇರೆ ವಿಷಯಗಳ ಮೇಲೆ ಎಂದು ಅವರು ಹೇಳಿದರು.

ಲೋಕಸಭೆ ಚುನಾವಣೆಗೂ ಮುನ್ನ ಎನ್ ಡಿಎ ವಿರುದ್ಧ ‘ಮಾಜಿ’ಗಳ ಯುದ್ಧ!

ಶಿವಸೇನೆಯೊಂದಿಗೆ ಈಗಾಗಲೇ ನಾವು ಮಾತುಕತೆ ಆರಂಭಿಸಿದ್ದೇವೆ. ಅದು ನಮ್ಮೊಂದಿಗಿರುತ್ತದೆ ಎಂಬ ನಂಬಿಕೆ ನಮಗಿದೆ ಎಂದು ಅವರು ಹೇಳಿದರು.ಮಹಾಘಟಬಂಧನ 
ಮಹಾಘಟಬಂಧನ ಎಂಬ ಭ್ರಮೆ

“ವಿಪಕ್ಷಗಳ ಮಹಾಘಟಬಂಧನ ಒಂದು ಭ್ರಮೆಯಷ್ಟೆ. ಅದು ಅಸ್ತಿತ್ವದಲ್ಲೇ ಇಲ್ಲ” ಎಂದು ಅವರು ಹೇಳಿದರು. 2014 ರಲ್ಲಿ ನಾವು ಅವರೆಲ್ಲರ ವಿರುದ್ಧ ಹೋರಾಡಿದ್ದೇವೆ. ಅವರೆಲ್ಲ ಪ್ರಾದೇಶಿಕ ನಾಯಕರು. ಅವರು ಕಾಂಗ್ರೆಸ್ಸಿಗೆ ಸಹಾಯ ಮಾಡಲು ಸಾಧ್ಯವಿಲ್ಲ. ಮಹಾಘಟಬಂಧನ ಆರಂಭಕ್ಕೂ ಮುನ್ನವೇ ಮುರಿದು ಬೀಳುವುದು ಗ್ಯಾರಂಟಿ” ಎಂದು ಲೇವಡಿ ಮಾಡಿದರು.

ಬಿಜೆಪಿ ಸಾಧನೆ 
ಪ್ರಚಾರದ ಮಾನದಂಡವೇನು?

ನಾವು ಕಳೆದ ಐದು ವರ್ಷಗಳಿಂದ ರಾಷ್ಟ್ರದ ಭದ್ರತೆಗೆ ಏನೆಲ್ಲ ಮಾಡಿದ್ದೇವೆ, ಭ್ರಷ್ಟಾಚಾರ ನಿರ್ಮೂಲನೆಗೆ ಪಣತೊಟ್ಟಿದ್ದೇವೆ. 8 ಕೋಟಿ ಮನೆಗಳಿಗೆ ಶೌಚಾಲಯ ಒದಗಿಸಿದ್ದೇವೆ. 2.5 ಕೋಟಿ ಮನೆಗಳಿಗೆ ವಿದ್ಯುತ್ ನೀಡಿದ್ದೇವೆ. ಇವುಗಳನ್ನೇ ನಾವು ಪ್ರಚಾರದ ಮಾನದಂಡವನ್ನಾಗಿ ಬಳಸುತ್ತೇವೆ.

ಬಿಜೆಪಿ ಅನಿವಾರ್ಯ 
ದೇಶಕ್ಕೆ ಬಿಜೆಪಿ ಅನಿವಾರ್ಯ!

ಕೇವಲ ಬಿಜೆಪಿಗೆ ಮಾತ್ರವಲ್ಲ, ಈ ದೇಶಕ್ಕು ಒಂದು ಬಲಾಢ್ಯ ಸರ್ಕಾರದ ಅಗತ್ಯವಿದೆ. ಅದನ್ನು ಬಿಜೆಪಿ ನೀಡಲಿದೆ ಎಂದರು. ಛತ್ತೀಸ್ ಗಢ, ರಾಜಸ್ಥಾನ ಮತ್ತು ಮಧ್ಯಪ್ರದೇಶದ ಚುನಾವಣೆಗಳು ಬಿಜೆಪಿ ಪರವಾಗಿರಲಿಲ್ಲ ಎಂಬುದು ನಿಜ. ಆದರೆ ಅದನ್ನು 2019 ರ ಲೋಕಸಭೆ ಚುನಾವಣೆಗೆ ಜೋಡಿಸುವುದು ಸರಿಯಲ್ಲ. ಲೋಕಸಭೆ ಚುನಾವಣೆ ಬೇರೆಯದೇ ವಿಷಯಗಳನ್ನು ಮುಂದಿಟ್ಟುಕೊಂಡು ನಡೆಯಲಿದೆ ಎಂದ ಅಮಿತ್ ಶಾ, ಜನರ ಸೇವೆ ಮಾಡುವುದು ನಮ್ಮ ಕರ್ತವ್ಯ ಎಂದರು.

ಯಾರು ಅಧಿಕಾರಕ್ಕೆ? 
ನಮ್ಮ ಬಲದೊಂದಿಗೆ ಹೋರಾಡುತ್ತೇವೆ

2014 ರಲ್ಲಿ ಬಿಜೆಪಿ ಕೇವಲ ಆರು ರಾಜ್ಯಗಳಲ್ಲಿ ಅಧಿಕಾರದಲ್ಲಿತ್ತು. ಈಗ ನಾವು ಹದಿನಾರು ರಾಜ್ಯಗಳಲ್ಲಿ ಅಧಿಕಾರದಲ್ಲಿದ್ದೇವೆ. ಈಗ ನೀವು ಹೇಳಿ, ಯಾರು 2019 ರಲ್ಲಿ ಅಧಿಕಾರಕ್ಕೆ ಬರುತ್ತಾರೆ? ಎಂದು ಅವರು ಪ್ರಶ್ನಿಸಿದರು. ನಾವು ನಮ್ಮ ಬಲದೊಂದಿಗೆ ಚುನಾವಣೆ ಎದುರಿಸುತ್ತೇವೆಯೇ ಹೊರತು ಮತ್ತೊಬ್ಬರ ದೌರ್ಬಲ್ಯವನ್ನು ಮುಂದಿಟ್ಟುಕೊಂಡಲ್ಲ ಎಂದು ಸ್ಪಷ್ಟಪಡಿಸಿದರು.


Continue Reading
Click to comment

Leave a Reply

Your email address will not be published. Required fields are marked *

ಅರಸೀಕೆರೆ

`ಎಲ್ಲರೂ ಗಿಡ ನೆಟ್ಟು ಪೋಷಣೆ ಮಾಡಿ’

Published

on

By

ಹಾಸನ (ಅರಸೀಕೆರೆ):ಅರಸೀಕೆರೆ ತಾಲೂಕಿನಾದ್ಯಂತ ಒಂದು ವರ್ಷಗಳಿಂದ ಪರಿಸರ ಪ್ರೇಮಿ ವಿಜಯ್ ಕುಮಾರ್ ಗಿಡ ನೆಟ್ಟು ಪೋಷಣೆ ಮಾಡುತ್ತಾ ಬಂದಿದ್ದಾರೆ.

ಸದ್ಯ ಇಂದು ಪರಿಸರ ದಿನಾಚರಣೆ ಅಂಗವಾಗಿ ಮತ್ತೊಂದು ಸಸಿ ನೆಟ್ಟು ಸುಮಾರು ಇಲ್ಲಿಯವರೆಗೂ ೨ ಲಕ್ಷ ಸಸಿಗಳನ್ನು ನೆಟ್ಟು ಪೋಷಿಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಇನ್ನು ಈ ಗಿಡ ನೆಡುವ ಕಾರ್ಯಕ್ರಮದಲ್ಲಿ ಹಾಜರಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಉಪಾಧ್ಯಕ್ಷ ವಿ.ಟಿ.ಬಸವರಾಜ್ ಮಾತನಾಡಿ, ಗಿಡಮರಗಳಿಂದ ನಮ್ಮ ಪರಿಸರ ತಂಪಾಗಿರುತ್ತದೆ.ಮರಗಳು ಬಿಡುವ ಆಮ್ಲಜನಕದಿಂದ ಜನಸಾಮಾನ್ಯರಿಗೆ ಒಳ್ಳೆಯ ಗಾಳಿ ಸಿಗುತ್ತದೆ.ಈಗಾಗಲೇ ಆಕ್ಸಿಜನ್ ಗೋಸ್ಕರ ಜನರು ಪರದಾಡುವ ಪರಿಸ್ಥಿತಿ ಬಂದಿದೆ.ಗಿಡಮರಗಳು ಬೆಳೆದರೆ ನಮಗೆ ನಮ್ಮ  ಪರಿಸರಕ್ಕೆ ಒಳ್ಳೆಯದು ಎಂದರಲ್ಲದೆ, ಇಂದು ಪರಿಸರ ದಿನಾಚರಣೆ ಅಂಗವಾಗಿ ಮನೆಗೊಂದು ಮರ, ಊರಿಗೊಂದು ವನ ಎಂಬAತೆ ಎಲ್ಲರೂ ಗಿಡ ನೆಟ್ಟು ಪೋಷಣೆ ಮಾಡಿ ಎಂದು ಕರೆ ನೀಡಿದರು.

ಇದೇ ವೇಳೆ ಕಾರ್ಯಕ್ರಮದಲ್ಲಿ ಅವಿನಾಶ್ ನಾಯ್ಡು, ಲಾಳನಕೆರೆ ಯೋಗೀಶ್, ಶಶಿ ಯಾದವ್, ಉಮಾ ಕುಮಾರ್, ಸುಧಾ, ಸಿಂಧು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಜೀವನ್ ಕುಮಾರ್ ಎಕ್ಸ್ ಪ್ರೆಸ್ ಟಿವಿ (ಅರಸೀಕೆರೆ) ಹಾಸನ

Continue Reading

ಆರೋಗ್ಯ / HEALTH

ಕೊರೊನಾ ರೋಗಿಗಳೊಂದಿಗೆ ಡಾಕ್ಟರ್ ಗಳ ಹಾಡು..ಡ್ಯಾನ್ಸ್..

Published

on

By

ಕಲಬುರಗಿ : ಕೊರೊನಾ ಕಡಿಮೆಯಾದ ಹಿನ್ನಲೆಯಲ್ಲಿ ಕಲಬುರಗಿ ನಗರದ ಬಸವೇಶ್ವರ ಆಸ್ಪತ್ರೆ ವೈದ್ಯರು ಕೊರೊನಾ ರೋಗಿಗಳೊಂದಿಗೆ ಕುಣಿದು ಕುಪ್ಪಳಿಸಿದ್ದಾರೆ..

ಅಂದ ಹಾಗೇ ವರನಟ ಡಾ.ರಾಜಕುಮಾರ್ ಅವರ ಸೂಪರ್ ಹಿಟ್ ಚಿತ್ರಗೀತೆ `ನಗುತ್ತಾ..ನಗುತ್ತಾ..ಬಾಳು ನೀನು ಎಂಬ ಹಾಡಿಗೆ’ ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿಗಳು ಸಖತ್ ಸ್ಟೇಫ್ ಹಾಕಿದ್ದಾರೆ..

ಸದ್ಯ ಆಸ್ಪತ್ರೆ ವೈದ್ಯರ ಹಾಡುಗಾರಿಗೆ ಹಾಗೂ ಡ್ಯಾನ್ಸ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದ್ದು, ಸಾರ್ವಜನಿಕರು ಸಹ ಫುಲ್ ಖುಷ್ ಆಗಿದ್ದಾರೆ.

ಇನ್ನು ರಾಜ್ಯದಲ್ಲಿ ಪಾಸಿಟಿವ್ ಸಂಖ್ಯೆಯಲ್ಲಿ ೩೦ನೇ ಸ್ಥಾನಕ್ಕೆ ಕಲಬುರಗಿ ಜಿಲ್ಲೆ ಇಳಿದಿದೆ.ಜೊತೆಗೆ ಬೀದರ್ ಬಿಟ್ಟರೆ ಕಲಬುರಗಿಯಲ್ಲೇ ಅತೀ ಕಡಿಮೆ ಅಂದರೆ ಕೇವಲ ೩.೮%ಗೆ ಪಾಸಿಟಿವ್ ಸಂಖ್ಯೆ ಇಳಿದಿದೆ..

ಉಮೇಶ್ ಅಚಲೇರಿ ಎಕ್ಸ್ ಪ್ರೆಸ್ ಟಿವಿ ಕಲಬುರಗಿ

Continue Reading

ಆರೋಗ್ಯ / HEALTH

ಹತ್ತಲ್ಲ, ಇಪ್ಪತ್ತಲ್ಲ ಐವತ್ತು ಲಕ್ಷ ರೂ. ಬೆಲೆಬಾಳುವ ಔಷಧಿ ದಾನ ಮಾಡಿದ ಅಪರಿಚಿತ..!

Published

on

By

ಹಾವೇರಿ(ರಾಣೆಬೆನ್ನೂರು):ಕೊರೊನಾ ಸಂದರ್ಭದಲ್ಲಿ ರೋಗಿಗಳಿಂದ ಹಿಡಿದು ಬಡವ, ಶಮ್ರಿಕ ಸೇರಿ ಇತರೆ ವರ್ಗದವರಿಗೆ ದಾನಿಗಳು ಮುಂದೆ ಬಂದು ದಾನ ಮಾಡುವುದನ್ನು ನೋಡಿದ್ದೇವೆ.ಆದರೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ಮಾತ್ರ ಅನಾಮಧೇಯ ವ್ಯಕ್ತಿಯೊಬ್ಬರು ಸುಮಾರು ೫೦ ಲಕ್ಷ ರೂಪಾಯಿ ಬೆಲಬಾಳುವ ಔಷಧಿಗಳ ದಾನ ಮಾಡಿ ತೆರೆಮರೆಗೆ ಉಳಿದಿದ್ದಾರೆ.

ಅಂದ ಹಾಗೇ ಕೋವಿಡ್‌ಗೆ ಸಂಬAಧಿಸಿದAತೆ ಸುಮಾರು ೫೦ ಲಕ್ಷ ರೂಪಾಯಿ ಮೌಲ್ಯದ ಔಷಧಿಗಳು, ಮಾಸ್ಕ್, ಫೇಸ್ ಶೀಲ್ಡ್, ಮತ್ತು ಇಂಜೆಕ್ಷನ್‌ಗಳನ್ನು ಹೆಸರು ಹೇಳಲು ಇಚ್ಛಿಸದ ದಾನಿಯೊಬ್ಬರು ಹಾವೇರಿ ಜಿಲ್ಲಾಡಳಿತಕ್ಕೆ ಹಸ್ತಾಂತರ ಮಾಡಿದ್ದಾರೆ…

ಸದ್ಯ ಹಾವೇರಿ ಜಿಲ್ಲಾಡಳಿತವು ಶೀಘ್ರದಲ್ಲೇ ಇದನ್ನು ಜಿಲ್ಲೆಯ ಕೋವಿಡ್ ಆಸ್ಪತ್ರೆಗಳು ಮತ್ತು ಕೋವಿಡ್ ಆರೈಕೆ ಕೇಂದ್ರಗಳಿಗೆ ನೀಡಲಿದ್ದು,ಹಾವೇರಿ ಜಿಲ್ಲಾಧಿಕಾರಿ ಆ ಅಪರಿಚಿತ ದಾನಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

 

ಬಸವನಗೌಡ ಎಕ್ಸ್ ಪ್ರೆಸ್ ಟಿವಿ (ರಾಣೆಬೆನ್ನೂರು) ಹಾವೇರಿ

Continue Reading

Trending

Copyright © 2023 EXPRESS TV KANNADA

kuşadası escort kayseri escort kocaeli escort canlı maç izle selcuksports güvenilir bahis siteleri deneme bonusu deneme bonusu veren siteler bahis siteleri https://resimlihaber.org/ canlı bahis siteleri güvenilir bahis siteleri http://seu.frvm.utn.edu.ar/guvenilir-bahis-siteleri.html casino sitelerimıknatısmaç izle