Connect with us

ಬೆಂಗಳೂರು

ನಾವು ಒಂಥರಾ ಸೆಟ್‌ದೋಸೆ ಕಣ್ರಿ, ರಾಜಣ್ಣರವರನ್ನು ಹಾಡಿ ಹೊಗಳಿದ ಎಸ್.ಆರ್.ವಿಶ್ವನಾಥ್

Published

on

ಬೆಂಗಳೂರು: ರಾಜಣ್ಣರವರು ನಮ್ಮ ಆತ್ಮೀಯ ಸ್ನೇಹಿತ, ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರಾಗಿ, ಸ್ವಯಂಸೇವಕರಾಗಿ ಸಂಘದಲ್ಲಿ ಕೆಲಸ ಮಾಡಿಕೊಂಡು ಬಂದಿದ್ದಾರೆ, ಎಲ್ಲದಕ್ಕಿಂತ ಹೆಚ್ಚಾಗಿ ಆತ ನನ್ನ ಆತ್ಮೀಯ ಗೆಳೆಯ, ನಾವು ಪ್ರಾರಂಭದಿಂದಲೂ ಕೂಡ ಸಾಕಷ್ಟು ಕಷ್ಟಪಟ್ಟು ಪಕ್ಷವನ್ನು ಕಟ್ಟಿಕೊಂಡು ಬಂದವರು, ಅವರ ಸೇವೆಯನ್ನು ನಮ್ಮ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅವರಿಗೆ ರಾಷ್ಟ್ರೀಯ ತೋಟಗಾರಿಕಾ ನಿರ್ದೇಶಕರನ್ನಾಗಿ ನೇಮಕ ಮಾಡಿರುವುದು ಬಹಳ ಸಂತೋಷದ ಸಂಗತಿ ಎಂದರು.  ಪ್ರಾರಂಭದ ಹಂತದಲ್ಲಿ ನಾಗರಾಜರೆಡ್ಡಿ, ರಾಜಣ್ಣ ಹಾಗೂ ನಮ್ಮನ್ನ ಎಲ್ಲರೂ ಸೆಟ್ ದೋಸೆ ಅಂತ ಕರೆತಾ ಇದ್ರು, ಪಕ್ಷದಲ್ಲಿ ರಾಜಣ್ಣ ಅವರದ್ದು ೪೦ ವರ್ಷದ ಸೇವೆ ಇದ್ದು, ಯಾವ ಅಧಿಕಾರವನ್ನು ಕೂಡ ಅವರು ಬಾಯಿ ಬಿಟ್ಟು ಕೇಳಿದ ಉದಾಹರಣೆಗಳಿಲ್ಲ ಎಂದರು.  ಇದೇ ಸಮಯದಲ್ಲಿ ಎಸ್.ಎನ್.ರಾಜಣ್ಣ ಮಾತನಾಡಿ, ನಮ್ಮ ಎಲ್ಲಾ ರಾಜ್ಯ ನಾಯಕರುಗಳಿಗೆ ಹೃದಯಪೂರ್ವಕ ಅಭಿನಂದನೆಗಳನ್ನು ತಿಳಿಸುತ್ತೇನೆ ಎಂದು ಎಲ್ಲಾ ನಾಯಕರುಗಳಿಗೆ ಧನ್ಯವಾದಗಳನ್ನು ತಿಳಿಸಿದರು. ಶಾಸಕರು ನಿಷ್ಟಾವಂತ ಕಾರ್ಯಕರ್ತರಿಗೆ ಏನು ಮಾಡಿಕೊಟ್ಟಿಲ್ಲ ಎಂಬ ದೂರುಗಳು ಸಾಕಷ್ಟು ದಿನದಿಂದ ಕೇಳಿ ಬರುತ್ತಿದ್ದವು, ನಿನ್ನೆ ಮೊನ್ನೆ ಪಕ್ಷಕ್ಕೆ ಬಂದ ಕಡತನಮಲೆ ಸತೀಶ್ ಅವರಿಗೆ ಸ್ಥಾನಮಾನ ಕೊಟ್ಟರು, ವರ್ಷಾನುಗಟ್ಟಲೇ ಜೊತೆಗೆ ಇರುವ ರಾಜಣ್ಣ ಅವರನ್ನು ನಿರ್ಲಕ್ಷ್ಯ ಮಾಡಿದ್ದರೂ ಎಂಬ ವದಂತಿಗಳು ಕೂಡ ಹಬ್ಬಿಕೊಂಡಿದ್ದವು, ಇದೀಗ ರಾಜಣ್ಣ ಅವರಿಗೂ ಕೂಡ ಒಂದು ಸಿಹಿ ಸುದ್ದಿಯನ್ನು ಶಾಸಕ ಎಸ್.ಆರ್.ವಿಶ್ವನಾಥ್ ಕೊಟ್ಟಿದ್ದಾರೆ. ರಾಷ್ಟ್ರೀಯ ತೋಟಗಾರಿಕಾ ನಿರ್ದೇಶಕರನ್ನಾಗಿ ಮಾಡುವ ಮೂಲಕ ಇಷ್ಟು ವರ್ಷ ಬಿಜೆಪಿಯಲ್ಲಿ ಸೇವೆ ಸಲ್ಲಿಸಿದ್ದಕ್ಕೆ ಸಣ್ಣ ಪ್ರಮಾಣದ ಕೊಡುಗೆ ನೀಡಿದ್ದಾರೆ. ಇದರಿಂದ ಕೊಂಚ ಮಟ್ಟಿಗೆ ಹಳೆಯ ಕಾರ್ಯಕರ್ತರುಗಳು ಯಲಹಂಕ ಕ್ಷೇತ್ರದಲ್ಲಿ ಸಂತೋಷದ ನಗೆ ಬೀರುತ್ತಿದ್ದಾರೆ. ಒಟ್ಟಿನಲ್ಲಿ ಹಳೆಯ ಕಾರ್ಯಕರ್ತರನ್ನು ಮೂಲೆಗುಂಪು ಮಾಡುವ ವಿಷಯದಲ್ಲಿ ಶಾಸಕ ಎಸ್.ಆರ್.ವಿಶ್ವನಾಥ್ ಸಾಕಷ್ಟು ಸವಾಲುಗಳನ್ನು ಎದುರಿಸಿದ್ದು ಮಾತ್ರ ಸತ್ಯ.

Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

ಸಿಡಿಲು ಬಡಿದು ನಾಲ್ವರ ಸಾವು

Published

on

By

ವಿಜಯನಗರ ಜಿಲ್ಲೆಯ ಕೂಡ್ಲಗಿ ತಾಲ್ಲೂಕಿನ ವಿವಿಧ ಪ್ರದೇಶಗಳಲ್ಲಿ ಸಿಡಿಲು ಬಡಿದು ನಾಲ್ವರು ಸಾವನ್ನಪ್ಪಿದ್ದಾರೆ.ಮೊದಲ ಘಟನೆಯಲ್ಲಿ ಮೃತರನ್ನು ಚೆನ್ನಾಪುರಿ ಮತ್ತು ವೀರಣ್ಣ ಎಂದು ಗುರುತಿಸಲಾಗಿದ್ದು, ಹೊಲಗಳಲ್ಲಿ ದನ ಮೇಯಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಮತ್ತೊಂದು ಘಟನೆಯಲ್ಲಿ, ಹರವಡಹಳ್ಳಿಯ ಜರ್ಮಹಳ್ಳಿ ಮಾಜಿ ಗ್ರಾಮ ಪಂಚಾಯತ್ ಸದಸ್ಯ ರಾಜಶೇಖರ್ ತಮ್ಮ ಕೃಷಿ ಜಮೀನಿನಿಂದ ಹಿಂದಿರುಗುವಾಗ ಸಿಡಿಲು ಬಡಿದು ಸಾವನ್ನಪ್ಪಿದ್ದು, ಆತನ ಜೊತೆಗಿದ್ದ ಮತ್ತೊಬ್ಬ ವ್ಯಕ್ತಿ ಗಾಯಗೊಂಡಿದ್ದಾನೆ. ಮೂರನೇ ಘಟನೆಯಲ್ಲಿ, ಅಯ್ಯನಹಳ್ಳಿ ಗ್ರಾಮದ ಪತ್ರೆಪ್ಪ ತನ್ನ ಕಿರಾಣಿ ಅಂಗಡಿ ಬಾಗಿಲು ಮುಚ್ಚುತ್ತಿದ್ದಾಗ ಸಿಡಲು ಬಡಿದು ಸಾವನ್ನಪ್ಪಿದ್ದಾರೆ. ತಹಶೀಲ್ದಾರ್ ಮಹಾಬಲೇಶ್ವರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Continue Reading

ಬೆಂಗಳೂರು

“ರಾಜ್ಯದಲ್ಲಿ ಉತ್ಪಾದನೆ ಆಗುವ ಆಕ್ಸಿಜನ್ ಇಲ್ಲೇ ಬಳಕೆಯಾಗ್ಬೇಕು”

Published

on

By

ಆಕ್ಸಿಜನ್ ಸರಬರಾಜು ಬಗ್ಗೆ ಸಭೆ ನಡೆಸಿದ್ದೇವೆ. ಟಾಸ್ಕ್ ಫೋರ್ಸ್ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ರು. ಹಲವು ಸೂಚನೆ ನೀಡಲಾಗಿದೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ನಮ್ಮ ರಾಜ್ಯದಲ್ಲಿ ಉತ್ಪಾದನೆ ಆಗುವ ಆಕ್ಸಿಜನ್ ನಮ್ಮಲ್ಲೇ ಬಳಕೆ ಆಗುವಂತೆ ಆಗಬೇಕು. ಈ ಬಗ್ಗೆ ಕೇಂದ್ರ ಸಚಿವ ಪಿಯೂಶ್ ಘೋಯಲ್ ಜೊತೆ ಮಾತುಕತೆ ಮಾಡಿದ್ದೇನೆ ಎಂದಿದ್ದಾರೆ.

Continue Reading

ಬೆಂಗಳೂರು

ತೇಜಸ್ವಿ ಸೂರ್ಯ ಒಳ್ಳೆ ಕೆಲಸ ಮಾಡಿದ್ದಾರೆ

Published

on

By

ತೇಜಸ್ವಿ ಸೂರ್ಯ ಒಳ್ಳೆ ಕೆಲಸ ಮಾಡಿದ್ದಾರೆ

ಆಮ್ಲಜನಕ ಕೊರತೆಯಿಂದ ಇನ್ನು ಮುಂದೆ ಯಾವುದೇ ಸಾವು‌ ರಾಜ್ಯದಲ್ಲಿ ಸಂಭವಿಸದಂತೆ ನೋಡಿಕೊಳ್ಳಿ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಒತ್ತಾಯಿಸಿದ್ದೇನೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಇವತ್ತು ಆಕ್ಸಿಜನ್ ಕೊರತೆಯಿಂದ ಬಹಳಷ್ಟು ಮಂದಿ ಸಾವನ್ನಪ್ಪುತ್ತಿದ್ದಾರೆ. ಈಗಾಗಲೇ 28 ಜನ ಚಾಮರಾಜನಗರದಲ್ಲಿ ಸತ್ತಿದ್ದಾರೆ. 3 ಜನ ಸತ್ತಿದ್ದಾರೆ ಎಂಬ ಸುಧಾಕರ್ ಹೇಳಿಕೆ ಶುದ್ಧ ಸುಳ್ಳು. ತೇಜಸ್ವಿ ಸೂರ್ಯ ಬೆಡ್ ಬ್ಲಾಕಿಂಗ್ ಬಗ್ಗೆ ಹೇಳಿದ್ದಾರೆ. ಇಟ್ಸ್ ಗುಡ್.‌ ಒಳ್ಳೇದೇ ಮಾಡಿದ್ದಾರೆ. ಆಕ್ಸಿಜನ್ ಕೊರತೆ ಆಗದಂತೆ ನೋಡಿಕೊಳ್ಳುವುದು ಸರ್ಕಾರದ ಜವಾಬ್ದಾರಿ ಎಂದರು.

Continue Reading

Trending

Copyright © 2023 EXPRESS TV KANNADA

kuşadası escort kayseri escort kocaeli escort canlı maç izle selcuksports güvenilir bahis siteleri deneme bonusu deneme bonusu veren siteler bahis siteleri https://resimlihaber.org/ canlı bahis siteleri güvenilir bahis siteleri http://seu.frvm.utn.edu.ar/guvenilir-bahis-siteleri.html casino sitelerimaç izle