ಬೆಂಗಳೂರು:ಡಿ-೩೧: ಬೆಂಗಳೂರು ಉತ್ತರ ತಾಲ್ಲೂಕಿನ ಕುದುರೆಗೆರೆ ಗ್ರಾಮದಲ್ಲಿ ಅದ್ದೂರಿಯಾಗಿ ವೈಕುಂಠ ಏಕಾದಶಿ ಹಾಗೂ ಹನುಮ ಜಯಂತಿಯನ್ನು ಆಚರಣೆ ಮಾಡಲಾಗುತ್ತದೆ ಎಂದು ಆಲೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಕೆ.ಟಿ.ಕೃಷ್ಣಮೂರ್ತಿಯವರು ತಿಳಿಸಿದರು.
ವಿಸ್ಮಯ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು ಪ್ರತಿ ವರ್ಷ ಗ್ರಾಮದಲ್ಲಿ ಗ್ರಾಮಸ್ಥರುಗಳ ನೇತೃತ್ವದಲ್ಲಿ ಆಚರಣೆ ಮಾಡಲಾಗುತ್ತಿದ್ದು, ಸಾವಿರಾರು ಜನರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಾರೆ, ಈ ವರ್ಷವೂ ಕೂಡ ಸಾಕಷ್ಟು ಜನರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು ಎಂದು ಅವರು ಮಾಹಿತಿ ನೀಡಿದರು.