ಚಿಕ್ಕಬಳ್ಳಾಪುರ

ವಿಷ ಪ್ರಸಾದ ಸೇವಿಸಿ ಮಹಿಳೆ ಸಾವು : 5 ಜನ ಅಸ್ವಸ್ಥ..!

Published

on

ಚಿಕ್ಕಬಳ್ಳಾಪುರ: ಸುಳ್ವಾಡಿ ದೇವಸ್ಥಾನದ ಪ್ರಕರಣ ಮಾಸುವ ಬೆನ್ನಲ್ಲೆ ಮೊತ್ತೊಂದು
ಪ್ರಕರಣ ನಡೆದಿದೆ. ಚಿಂತಾಮಣಿ ನಗರದ ನಾರಸಿಂಗ್ ಪೇಟೆಯ ಗಂಗಾಭಾವನಿ
ದೇವಾಲಯದ ವಿಷ ಪ್ರಸಾದ ಸೇವನೆಯಿಂದ ಒಬ್ಬ ಮಹಿಳೆ ಸಾವನ್ನಪ್ಪಿದ್ದಾರೆ. ಚಿಕ್ಕಬಳ್ಳಾಪುರ
ಜಿಲ್ಲೆಯ ಚಿಂತಾಮಣಿ ನಗರದ ನರಸಿಂಹ ಪೇಟೆಯ ಗಂಗಮ್ಮ ಗುಡಿ ದೇವಸ್ಥಾನದಲ್ಲಿ
ಶುಕ್ರವಾರ ಪ್ರಯುಕ್ತ ವಿಶೇಷ ಪೂಜಾ ಕೈಂಕರ್ಯವಿತ್ತು. ಈ ವೇಳೆ ದೇವರ ಪ್ರಸಾದ
ಸೇವಿಸಿ ಕವಿತಾ(28) ಸಾವನ್ನಪ್ಪಿ, ಒಂದೇ ಕುಟುಂಬದ 5 ಮಂದಿ ಅಸ್ವಸ್ಥರಾಗಿದ್ದಾರೆ.
ಗಂಗಾಧರ, ರಾಜ, ರಾಧ ಹಾಗು ಮಕ್ಕಳಾದ ಗಾನವಿ, ಶರಣ ಅಸ್ವಸ್ಥರಾಗಿದ್ದಾರೆ.ಈ
ಸಂಬಂಧ ಚಿಂತಾಮಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Click to comment

Trending

Exit mobile version