Connect with us

ಕ್ರೀಡೆ

ಗಣರಾಜ್ಯೋತ್ಸವಕ್ಕೆ ಟೀಂ ಇಂಡಿಯಾ ಗಿಫ್ಟ್ – ಕಿವೀಸ್ ವಿರುದ್ಧ ಭರ್ಜರಿ ಗೆಲುವು

Published

on

ಮೌಂಟ್ ಮೌಂಗಾನೆ :  ಮೊದಲ ಏಕದಿನ ಪಂದ್ಯದಲ್ಲಿ ದಿಟ್ಟ ಪ್ರದರ್ಶನ ನೀಡಿ ಜಯ ಪಡೆದಿದ್ದ ಟೀಂ ಇಂಡಿಯಾ,
ಇದೀಗ ನ್ಯೂಜಿಲೆಂಡ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡರಲ್ಲೂ ಅಮೋಘ ಪ್ರದರ್ಶನ ತೋರಿದು 90 ರನ್ ಅಂತರದಲ್ಲಿ ಭರ್ಜರಿ ಗೆಲುವು ಪಡೆದುಕೊಂಡಿದೆ. ನ್ಯೂಜಿಲೆಂಡ್ ತಂಡಕ್ಕೆ ಗೆಲ್ಲಲು 325 ರನ್ ಗಳ ಬೃಹತ್ ಮೊತ್ತವನ್ನು ನೀಡಿ ಕೇವಲ 234 ರನ್ ಗಳಿಗೆ ಕಿವೀಸ್ ತಂಡವನ್ನು ಆಲೌಟ್ ಮಾಡುವ ಮೂಲಕ 5 ಪಂದ್ಯಗಳ ಟೂರ್ನಿಯಲ್ಲಿ 2-0 ಮುನ್ನಡೆ ಪಡೆದಿದ್ದಾರೆ.
ಇನ್ನೂ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದ ಟೀಂ ಇಂಡಿಯಾ ನಾಯಕ ಕೊಹ್ಲಿ ನಿರ್ಧಾರವನ್ನು
ಸಮರ್ಥಿಸುವಂತೆ ಆರಂಭಿಕರು ಬ್ಯಾಟ್ ಬೀಸಿದರು. ಆರಂಭಿಕರಾದ ರೋಹಿತ್ ಶರ್ಮಾ 87 (96 ಎಸೆತ, 9 ಬೌಂಡರಿ, 3 ಸಿಕ್ಸರ್) ರನ್ ಸಿಡಿಸಿ ವೃತ್ತಿ ಜೀವನದ 38ನೇ ಅರ್ಧ ಶತಕ ಪೂರೈಸಿದರೆ, ಶಿಖರ್ ಧವನ್‍ರ 66 ರನ್ (67 ಎಸೆತ, 9 ಬೌಂಡರಿ) 27 ನೇ ಅರ್ಧ ಶತಕ ಸಿಡಿಸಿ ಭಾರತ ಬೃಹತ್ ಮೊತ್ತ ಗಳಿಸಲು ಅಡಿಪಾಯ ಹಾಕಿಕೊಟ್ಟರು. ಮೊದಲ ವಿಕೆಟ್‍ಗೆ ಈ ಇಬ್ಬರ ಜೋಡಿ ಬರೋಬ್ಬರಿ 154 ರನ್ ಗಳ ಜೊತೆಯಾಟ ನೀಡಿತ್ತು. ಇತ್ತ ಪಂದ್ಯದಲ್ಲಿ ಮತ್ತೆ ಅರ್ಧ ಶತಕ ವಂಚಿತರಾದ ನಾಯಕ ಕೊಹ್ಲಿ 45 ಎಸೆತಗಳಲ್ಲಿ 5 ಬೌಂಡರಿಗಳ ನೆರವಿನಿಂದ 42 ರನ್ ಸಿಡಿಸಿದರು. ಕೊಹ್ಲಿಗೆ ಸಾಥ್ ನೀಡಿದ ರಾಯುಡು 49 ಎಸೆತಗಳಲ್ಲಿ 3 ಬೌಂಡರಿ, 1 ಸಿಕ್ಸರ್ ನೆರವಿನಿಂದ 47 ರನ್ ಗಳಿಸಿ ಅರ್ಧ ಶತಕ ಅಂಚಿನಲ್ಲಿ ಎಡವಿದರು.

Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

ಆಸ್ಟ್ರೇಲಿಯಾ ನೆಲದಲ್ಲಿ ಮತ್ತೊಂದು ಮೈಲುಗಲ್ಲು ಸ್ಥಾಪಿಸಿದ ಕೊಹ್ಲಿ..!

Published

on

By

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಶರವೇಗದಲ್ಲಿ ರನ್‌ಗಳಿಸುತ್ತಿರುವ ಟೀಮ್‌ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಈಗಾಗಲೇ ಹಲವು ದಾಖಲೆಗಳನ್ನು ಬರೆದಿದ್ದಾರೆ.ಇದೀಗ ಆಸ್ಟ್ರೇಲಿಯಾ ವಿರುದ್ಧ ಮೂರನೇ ಟಿ20 ಪಂದ್ಯದಲ್ಲಿ ಅರ್ಧಶತಕ ಸಿಡಿಸುವ ಮೂಲಕ ಕಾಂಗರೂ ನಾಡಿನಲ್ಲಿ ಮತ್ತೊಂದು ಮೈಲುಗಲ್ಲು ಸ್ಥಾಪಿಸಿದ್ದಾರೆ.ಆಸ್ಟ್ರೇಲಿಯಾ ನೆಲದಲ್ಲಿ ಮೂರು ಸಾವಿರ ರನ್‌ಗಳನ್ನು ದಾಖಲಿಸಿದ ಎರಡನೇ ಭಾರತೀಯ ಬ್ಯಾಟ್ಸ್ ಮನ್‌ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

ವರದಿ- ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Continue Reading

ಕ್ರೀಡೆ

ಐಪಿಎಲ್ ಟೂರ್ನ್ ನಿಂದ ಹೊರ ನಡೆದ ಸುರೇಶ್ ರೈನಾ..!

Published

on

By

ದುಬೈ : ಐಪಿಎಲ್ ಟೂರ್ನಿ ಆರಂಭಕ್ಕೂ ಮುನ್ನವೇ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಭಾರಿ ಹೊಡೆತ ಬಿದ್ದಿದೆ. ಚೆನ್ನೈ ಸೂಪರ್ಕಿಂಗ್ಸ್ ಅನುಭವಿ ಆಟಗಾರ ಸುರೇಶ್ ರೈನಾ ಟೂರ್ನಿಯಿಂದ ಹೊರ ಬಂದಿದ್ದಾರೆ. ಈ ಬಾರಿ ದುಬೈನಲ್ಲಿ ನಡೆಯಲಿರುವ ಐಪಿಎಲ್ ಟೂರ್ನಿಗೆ ಈಗಾಗಲೇ ಎಲ್ಲಾ ತಂಡಗಳು ಹಾಜರಾಗಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ದೀಪಕ್ ಚಹರ್ ಹಾಗು ತಂಡದ ಕೆಲ ಸದಸ್ಯರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು ಎಂದು ಸುದ್ದಿಯಾಗಿತ್ತು. ಇದೀಗ ಸುರೇಶ್ ರೈನಾ ಟೂರ್ನಿಯಿಂದ ಹೊರ ಬಂದಿದ್ದಾರೆಂದು ಚೆನ್ನೈ ಸೂಪರ್ ಕಿಂಗ್ಸ್ ತಂಡವೇ ಹೇಳಿಕೊಂಡಿದೆ. ಈ ಬಗ್ಗೆ ಸ್ವತಃ ಸಿಇಒ ವಿಶ್ವನಾಥ್, ಸುರೇಶ್ ರೈನಾ ಅವರು ವೈಯಕ್ತಿಕ ಕಾರಣಗಳಿಂದ ಭಾರತಕ್ಕೆ ವಾಪಸ್ ತೆರಳುತ್ತಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ. ಈ ಸಮಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಸುರೇಶ್ ರೈನಾ ಮತ್ತು ಅವರ ಕುಟುಂಬಕ್ಕೆ ಸಂಪೂರ್ಣ ಬೆಂಬಲವನ್ನು ನೀಡುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.

ವರದಿ-ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು..

Continue Reading

ಕ್ರೀಡೆ

ಪಾಂಡ್ಯ, ರಾಹುಲ್​ಗೆ ರಿಲೀಫ್ ಕೊಟ್ಟ ಬಿಸಿಸಿಐ

Published

on

By

ನವದೆಹಲಿ: ಭಾರತ ಕ್ರಿಕೆಟ್​ ತಂಡದ ಆಟಗಾರರಾದ ಕೆ.ಎಲ್​. ರಾಹುಲ್​ ಮತ್ತು ಹಾರ್ದಿಕ್​ ಪಾಂಡ್ಯ ಅವರ ಮೇಲಿದ್ದ ಅಮಾನತ್ತಿನ ಶಿಕ್ಷೆಯನ್ನು ಇದೀಗ ಬಿಸಿಸಿಐ ಹಿಂಪಡೆದಿದೆ. ಬಾಲಿವುಡ್​ ನಿರ್ದೇಶಕ, ನಟ ಮತ್ತು ನಿರೂಪಕ ಕರಣ್​ ಜೋಹರ್​ ನಡೆಸಿಕೊಡುವ ಕಾಫಿ ವಿತ್​ ಕರಣ್​ ಕಾರ್ಯಕ್ರಮದಲ್ಲಿ ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಮೂಲಕ ಬಿಸಿಸಿಐ ಕೆಂಗಣ್ಣಿಗೆ ಇಬ್ಬರೂ ಆಟಗಾರರು ಗುರಿಯಾಗಿದ್ದರು. ಸಾಮಾಜಿಕ ಜಾಲತಾಣಗಳಲ್ಲೂ ಸಂದರ್ಶನದಲ್ಲಿ ಇಬ್ಬರೂ ಆಟಗಾರರು ಆಡಿದ ಮಾತುಗಳಿಗೆ
ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಇದೀಗ ಆಲ್​ ರೌಂಡರ್​ ಹಾರ್ದಿಕ್​ ಪಾಂಡ್ಯ ಮತ್ತು ಓಪನರ್​ ಕೆ.ಎಲ್​. ರಾಹುಲ್​ ಅವರಿಗೆ ಬಿಸಿಸಿಐ ಕೊಂಚ ರಿಲೀಫ್​ ನೀಡಿದೆ. ಬಿಸಿಸಿಐನ ನಿರ್ವಾಹಕ ಸಮಿತಿ ಇಬ್ಬರು ಆಟಗಾರರ ಮೇಲಿದ್ದ ಮಧ್ಯಂತರ ಅಮಾನತ್ತು ಆದೇಶವನ್ನು ತಕ್ಷಣಕ್ಕೆ ಆಚರಣೆಗೆ ಬರುವಂತೆ ಹಿಂಪಡೆದಿದೆ.

Continue Reading

Trending

Copyright © 2023 EXPRESS TV KANNADA

kuşadası escort kayseri escort kocaeli escort canlı maç izle selcuksports güvenilir bahis siteleri deneme bonusu deneme bonusu veren siteler bahis siteleri https://resimlihaber.org/ canlı bahis siteleri güvenilir bahis siteleri http://seu.frvm.utn.edu.ar/guvenilir-bahis-siteleri.html deneme bonusu veren sitelercasino sitelerimıknatısmaç izle