ಕೋಲಾರ

ಕೋಲಾರ ಜಿಲ್ಲೆಯಲ್ಲೂ ಬಾರ್‌ಗೆ ಕನ್ನ

Published

on

ಶ್ರೀನಿವಾಸಪುರ: ಕೊಪ್ಪಳದಂತೆ ಕೋಲಾರ ಜಿಲ್ಲೆಯಲ್ಲೂ ಬಾರ್ ಅಂಡ್ ರೆಸ್ಟೋರೆಂಟ್‌ಗೆ ಕನ್ನ ಹಾಕಿರುವ ಘಟನೆ ಬೆಳಕಿಗೆ ಬಂದಿದೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ರೋಜೇನಹಳ್ಳಿಯ ವೀರಭದ್ರೇಗೌಡ ಎಂಬವರಿಗೆ ಸೇರಿದ ಲಕ್ಷ್ಮೀ ಬಾರ್ ಅಂಡ್ ರೆಸ್ಟೋರೆಂಟ್‌ಗೆ ಕನ್ನ ಹಾಕಿರುವ ಕುಡುಕರು ೪ ಲಕ್ಷ ರೂ. ಮೌಲ್ಯದ ಮದ್ಯ ದೋಚಿದ್ದಾರೆ.
ಇನ್ನು ಬಾರ್ ಅಂಡ್ ರೆಸ್ಟೋರೆಂಟ್ ಶೆಟರ್ ಮುರಿದು ಒಳ ನುಗ್ಗಿರುವ ಕಳ್ಳರು ಬಾರ್‌ನಲ್ಲಿದ್ದ ಹಣವನ್ನ ಬಿಟ್ಟು,ಕೇವಲ ಮದ್ಯವನ್ನ ಮಾತ್ರ ದೋಚಿ ಪರಾರಿಯಾಗಿದ್ದಾರೆ.
ಇನ್ನು ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಶ್ರೀನಿವಾಸಪುರ ಪೊಲೀಸರು ಹಾಗೂ ಅಬಕಾರಿ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಈ ಸಂಬAಧ ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಮಕೃಷ್ಣ ಎಕ್ಸ್ ಪ್ರೆಸ್ ಟಿವಿ ಶ್ರೀನಿವಾಸಪುರ

Click to comment

Trending

Exit mobile version