ಹುಬ್ಬಳ್ಳಿ:ವಾಣಿಜ್ಯನಗರಿಯಲ್ಲಿ ಮೊನ್ನೆ ನಡೆದ ಕಲ್ಲು ತೂರಾಟದ ಪ್ರಕರಣಕ್ಕೆ ಸಂಬAಧಿಸಿದAತೆ ಹುಬ್ಬಳ್ಳಿ ಸರ್ಕ್ಯೂಟ್ ಹೌಸನಲ್ಲಿ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಶಾಸಕ ಪ್ರಸಾದ ಅಬ್ಬಯ್ಯ ನೇತೃತ್ವದಲ್ಲಿ ಸರ್ವಧರ್ಮ ಸಭೆ ನಡೆಯಿತು.
ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್ ಡೌನ್ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದಿದ್ದು,ರಾಜ್ಯದಲ್ಲಿ ಹಲವು ಸಮಾಜದ ನಡುವೆ ವೈಮನಸ್ಸು ಉಂಟಾಗುವ ಪ್ರಕರಣ ಹೆಚ್ಚಾಗುತ್ತಿದೆ.ಅಲ್ಲದೇ ಮೊನ್ನೆಯಷ್ಟೇ ಹುಬ್ಬಳ್ಳಿಯಲ್ಲಿ ಸಾಮೂಹಿಕ ಪ್ರಾರ್ಥನೆಗಾಗಿ ತೆರಳಿದ್ದವರಿಂದ ಪೊಲೀಸರ ಮೇಲೆ ಹಲ್ಲೆ ಪ್ರಕರಣ ದಾಖಲಾಗಿದ್ದು, ಸಮಾಜದಲ್ಲಿ ಕೋಮುವಾದ ಸೃಷ್ಟಿಸುವ ಲಕ್ಷಣಗಳು ಗೋಚರಿಸುತ್ತಿವೆ ಇಂತಹ ಬೆಳವಣಿಗೆಗಳಿಗೆ ಕಡಿವಾಣ ಹಾಕಿ ಸೌಹಾರ್ದತೆಯಿಂದ ಸರ್ವಧರ್ಮ ಸಮನ್ವಯ ರೀತಿಯಲ್ಲಿ ಜೀವನ ನಡೆಸಬೇಕು ಎಂದು ಸಭೆಯಲ್ಲಿ ತೀರ್ಮಾನ ಕೈಗೊಂಡರು.
ಇದೇ ವೇಳೆ ಮಾತನಾಡಿದ ಬಸವರಾಜ ಹೊರಟ್ಟಿ ಹಾಗೂ ಅಂಜುಮನ್ ಇಸ್ಲಾಂ ಸಂಸ್ಥೆ ಅಧ್ಯಕ್ಷ ಯೂಸುಫ್ ಸವಣೂರ, ಕೊರೊನಾ ವೈರಸ್ ಭೀತಿ ಹಿನ್ನಲೆಯಲ್ಲಿ ದೇಶಾದ್ಯಂತ ಲಾಕ್ ಡೌನ್ ಆದೇಶ ಘೋಷಣೆಯಾಗಿದ್ದರು.ಈ ಸಂದರ್ಭದಲ್ಲಿ ಮಂಟೂರ ರಸ್ತೆಯಲ್ಲಿರುವ ಅರಳಿಕಟ್ಟಿ ಕಾಲೋನಿಯಲ್ಲಿ ನಮಾಜ್ ವಿಷಯಕ್ಕೆ ಸಂಬAಧಿಸಿದAತೆ ನಡೆದ ಕಲ್ಲು ತೂರಾಟ ಪ್ರಕರಣ ಖಂಡನೀಯವಾಗಿದೆ.ಇದರ ಬಗ್ಗೆ ಅಂಜುಮನ್ ಇಸ್ಲಾಂ ಸಂಸ್ಥೆಯು ಸೂಕ್ತ ಕ್ರಮ ಕೈಗೊಳ್ಳಲಿದೆ ಇದರಲ್ಲಿ ಯಾರು ಕೂಡ ಕೋಮುವಾದ ಸೃಷ್ಟಿಸಬಾರದು.
ಹು-ಧಾ ಮಹಾನಗರದಲ್ಲಿ ಹಿಂದೂ ಮುಸ್ಲಿಂ ಭಾಂದವರು ಸಹೋದರರಂತೆ ಜೀವನ ನಡೆಸುತ್ತಿದ್ದಾರೆ.ಕೆಲವು ವಿಕೃತ ಮನಸ್ಥಿತಿಯವರು ಇಂತಹ ಕೃತ್ಯ ಎಸಗಿದ್ದಾರೆ.ಆದರೇ ಯಾವುದೇ ಪ್ರಕರಣಕ್ಕೆ ಇಸ್ಲಾಂ ಧರ್ಮ ಪ್ರೇರಣೆ ನೀಡಿಲ್ಲ ಎಂದು ಹೇಳಿದರು.
ಈಗಾಗಲೇ ಹುಬ್ಬಳ್ಳಿ-ಧಾರವಾಡದ ಅಂಜುಮನ್ ಇಸ್ಲಾಂ ಸಂಸ್ಥೆಯೊAದಿಗೆ ಚರ್ಚೆ ನಡೆಸಲಾಗಿದೆ.ಸಮಾಜದಲ್ಲಿ ಒಳ್ಳೆಯ ರೀತಿಯ ವಾತಾವರಣ ನಿರ್ಮಾಣವಾಗಬೇಕು.ನಾವೂ ಸರ್ಕಾರದ ಆದೇಶವನ್ನ ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದೇವೆ.ಈಗಾಗಲೇ ೧೩೦ ಮಸೀದಿಗಳನ್ನು ಸಹ ಬಂದ್ ಮಾಡಿದ್ದೇವೆ. ಯಾವ ಮಸೀದಿಯಲ್ಲೂ ಸಾಮೂಹಿಕವಾಗಿ ಪ್ರಾರ್ಥನೆ ಮಾಡುತ್ತಿಲ್ಲ. ಯಾರು ಸಹ ಮನೆ ಬಿಟ್ಟು ಹೊರಬರಬಾರದು ಎಂದು ಮನವಿ ಮಾಡಿದರು.
೮ ರಂದು ಇರುವ ಶಭೇ ಭರಾತ್ ಹಬ್ಬದಂದು ಸಹ ಯಾರು ಸಹ ಮನೆಯಿಂದ ಹೊರಗೆ ಬರಬಾರದು. ಯಾರೂ ಖಬರಸ್ಥಾನಕ್ಕೂ ಸಹ ಹೋಗಬಾರದು.ಅಂಜುಮನ್ ಇಸ್ಲಾಂ ಸಂಸ್ಥೆಯಿAದಲೇ ಖಬರಸ್ಥಾನ ಸ್ವಚ್ಚತಾ ಕಾರ್ಯ ನಡೆಯುತ್ತಿದೆ ಎಂದು ಹೇಳಿದರು.
ಸರ್ಕಾರದ ಲಾಕ್ ಡೌನ್ ಆದೇಶವನ್ನ ನಾವೂ ಕಟ್ಟುನಿಟ್ಟಾಗಿ ಪಾಲಿಸುತ್ತೇವೆ.ಆದರೆ, ಯಾರೋ ಒಬ್ಬರು ಮುಸ್ಲಿಂರು ಮಾಡಿರೋ ತಪ್ಪಿಗೆ ಈಡೀ ಸಮುದಾಯಕ್ಕೆ ಕಪ್ಪು ಚುಕ್ಕೆ ತರಬಾರದು ಎಂದ ಅವರು,ಮುಸ್ಲಿಂ ಸಮಾಜದ ಮುಖಂಡರು ಸಮಾಜದಲ್ಲಿ ಜಾಗೃತೆ ಮೂಡಿಸಲು ಜಿಲ್ಲಾಡಳಿತ ಅವಕಾಶ ಕಲ್ಪಿಸುತ್ತಿಲ್ಲ ಎಂದು ಅವರು ಹೇಳಿದರು.
ಸಭೆಯಲ್ಲಿ ಮಾಜಿ ಸಚಿವ ಎ.ಎಂ ಹಿಂಡಸಗೇರಿ, ವಿಪ ಸದಸ್ಯ ಶ್ರೀನಿವಾಸ ಮಾನೆ, ಅಂಜುಮನ್ ಇಸ್ಲಾಂ ಸಂಸ್ಥೆಯ ಮುಖಂಡರು ಹಾಗೂ ಹಲವು ಜನಪ್ರತಿನಿಧಿಗಳು ಭಾಗಿಯಾಗಿದ್ದರು.