Connect with us

ದಾವಣಗೆರೆ

ಗುಂಡಿಟ್ಟು ಕೊಲ್ಲಿ,ಯಾರನ್ನ ಗೊತ್ತಾ..?

Published

on

ದಾವಣಗೆರೆ : ವೈರಸ್ ಹರಡುತ್ತಿರುವುದು ಒಂದು ರೀತಿಯ ಭಯೋತ್ಪಾದನೆ ಇದ್ದಂತೆ, ಅವರೆಲ್ಲ ದೇಶದ್ರೋಹಿಗಳು.ಹೀಗಾಗಿ ತಬ್ಲಿಘಿ ಸಮಾವೇಶಕ್ಕೆ ಹೋಗಿ ಚಿಕಿತ್ಸೆ ಪಡೆಯವದವರನ್ನು ಗುಂಡಿಟ್ಟು ಕೊಲ್ಲಬೇಕು ಅಂತ ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಹರಿಹಾಯ್ದಿದ್ದಾರೆ.
ದಾವಣಗೆರೆಯಲ್ಲಿ ಮಾತನಾಡಿದ ಅವರು,ದೆಹಲಿಯ ನಿಜಾಮುದ್ದೀನ್ ತಬ್ಲಿಘಿ ಜಮಾತ್ ಸಭೆಯಲ್ಲಿ ಭಾಗವಹಿಸಿದ್ದರು ಆಸ್ಪತ್ರೆಗೆ ಬನ್ನಿ ಎಂದು ಪ್ರಧಾನಿ, ಸಿಎಂ ಈಗಾಗಲೇ ಸಾಕಷ್ಟು ಬಾರಿ ಮನವಿ ಮಾಡಿದ್ದಾರೆ. ಆದರೆ ಕೆಲವರು ಉದ್ದೇಶ ಪೂರ್ವಕವಾಗಿ ಈ ರೀತಿಯಾಗಿ ಮಾಡಿದ್ದಾರೆ ಅಂತ ಕಿಡಿಕಾರಿದರು.
ತಬ್ಲಿಘಿ ಸಮಾವೇಶಕ್ಕೆ ಹೋಗಿ ಬಂದವರು ಚಿಕಿತ್ಸೆ ಪಡೆಯದೇ ಎಸ್ಕೇಪ್ ಆಗುತ್ತಿದ್ದರೋ ಅವರನ್ನು ಯಾರೂ ರಕ್ಷಣೆ ಮಾಡಬಾರದು. ಅವರನ್ನು ಗುಂಡಿಟ್ಟು ಕೊಲೆ ಮಾಡಿದರೂ ತಪ್ಪಿಲ್ಲ. ಎಲ್ಲಾ ಅಲ್ಪಸಂಖ್ಯಾತರು ಭಯೋತ್ಪಾದಕರಲ್ಲ, ದೇಶದ್ರೋಹಿಗಳು ಅಲ್ಲ ಅಂತ ಹೇಳಿದರು.

ನ್ಯೂಸ್ ಬ್ಯೂರೋ ಎಕ್ಸ್ ಪ್ರೆಸ್ ಟಿವಿ ದಾವಣಗೆರೆ

Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ / HEALTH

ಸಚಿವ ಭೈರತಿ ಬಸವರಾಜ್ ಕಾರಿಗೆ ಮುತ್ತಿಗೆ ಹಾಕಿದ ಕಾಂಗ್ರೆಸ್ ಕಾರ್ಯಕರ್ತರು..

Published

on

ದಾವಣಗೆರೆ : ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಕಾರಿಗೆ ಮುತ್ತಿಗೆ ಹಾಕಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಜಿಲ್ಲಾ ಕಾಂಗ್ರೆಸ್ ಕಿಸಾನ್ ಘಟಕದಿಂದ ಸಚಿವರ ಕಾರಿಗೆ ಮುತ್ತಿಗೆ ಹಾಕಿ ಜಿಲ್ಲಾ ಕಾಂಗ್ರೆಸ್ ಕಿಸಾನ್ ಘಟಕ ಅಧ್ಯಕ್ಷ ಬಸವರಾಜು
ವಿ.ಶಿವಗಂಗಾ ನೇತೃತ್ವದಲ್ಲಿ ಕೇಂದ್ರದ ವಿರುದ್ಧ ಪ್ರತಿಭಟನೆ ನಡೆಸಲಾಯಿತು.
ಅಲ್ಲದೆ, ಸಚಿವರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿ ಕರ್ನಾಟಕ ಕಿಸಾನ್ ಕಾಂಗ್ರೆಸ್ ಕಾರ್ಯಕರ್ತರು,ಕೇಂದ್ರದ ವಿರುದ್ಧ ಘೋಷಣೆ ಕೂಗಿ ಸಚಿವರಿಗೆ ಬಿಸಿ ಮುಟ್ಟಿಸಿದರು.
ಇನ್ನು ಪ್ರತಿಭಟನೆ ವೇಳೆ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಕಿಸಾನ್ ಘಟಕ ಅಧ್ಯಕ್ಷ ಬಸವರಾಜು ವಿ.ಶಿವಗಂಗಾ,ಕೋವಿಡ್ ೧೯ ಬಿಕ್ಕಟ್ಟಿನ ಮಧ್ಯೆ ಕೇಂದ್ರ ಸರ್ಕಾರವು ಹೊಸ ವಿದ್ಯುತ್ ಮಸೂದೆ ಜಾರಿಗೆ ತರುತ್ತಿದೆ.ದೇಶವೇ ಸಂಕಷ್ಟದಲ್ಲಿರುವಾಗ ಆಡಳಿತದಿಂದ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು.
ಅಲ್ಲದೆ,ಯಾವುದೇ ಕಾರಣಕ್ಕೂ ಹೊಸ ವಿದ್ಯುತ್ ಕಾಯ್ದೆ ಜಾರಿಗೆ ತರಬಾರದು.ಇದರ ವಿರುದ್ಧ ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಪ್ರಧಾನಿ ನರೇಂದ್ರ ಮೋದಿರ ಸ್ನೇಹಿತ ವಿದ್ಯುತ್ ಉದ್ಯಮಿ ಗೌತಮ್ ಅದಾನಿ ಸೇರಿ ಇತರರಿಗೆ ಲಾಬಿ ಮಾಡಿಕೊಳ್ಳಲು ಮುಂದಾಗಿದ್ದಾರೆ. ಜೊತೆಗೆ ಕೋವಿಡ್ ಬಿಕ್ಕಟ್ಟು ಸಂದರ್ಭ ಅಧಿಕಾರ ದುರ್ಬಳಕೆ ಮಾಡಿಕೊಳ್ಳುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ಕೆ.ಪ್ರವೀಣ್ ಕುಮಾರ್,ಯುವ ಮುಖಂಡರಾದ ಬಾತಿ ಶಿವಕುಮಾರ,ಕಿರಿಧರ್ ಸೇರಿದಂತೆ ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು.

ನ್ಯೂಸ್ ಬ್ಯೂರೋ ಎಕ್ಸ್ ಪ್ರೆಸ್ ಟಿವಿ ದಾವಣಗೆರೆ

Continue Reading

ಆರೋಗ್ಯ / HEALTH

ಶಿರಾದಿಂದ ಬಸ್ ಸಂಚಾರ ಆರಂಭ..

Published

on

ಶಿರಾ(ತುಮಕೂರು):ರಾಜ್ಯದಲ್ಲಿ ಇಂದಿನಿAದ ಬಸ್ ಸಂಚಾರ ಆರಂಭವಾಗಿದ್ದು, ಪ್ರಯಾಣಿಕರು ತಮ್ಮ ಊರುಗಳಿಗೆ ತೆರಳಲು ಸರದಿ ಸಾಲಿನಲ್ಲಿ ನಿಂತಿದ್ದ ದೃಶ್ಯ ಕಂಡು ಬಂತು.
ಪ್ರತಿಯೊಬ್ಬ ಪ್ರಯಾಣಿಕರನ್ನು ಗೇಟ್‌ನಲ್ಲಿಯೇ ತಡೆದು ಅವರ ಹೆಸರು, ಎಲ್ಲಿಂದ-ಎಲ್ಲಿಗೆ, ಮೊಬೈಲ್ ನಂಬರ್ ಪಡೆದು ಅವರಿಗೆ ಥರ್ಮಲ್ ಸ್ಕ್ಯಾನಿಂಗ್ ಮಾಡಿ, ಬಸ್‌ನಿಲ್ದಾಣದ ಒಳಗೆ ಬಿಡಲಾಯಿತು.
ಅಲ್ಲದೆ, ಥರ್ಮಲ್ ಮೀಟರ್‌ನಲ್ಲಿ ೯೯ ಡಿಗ್ರಿಗಿಂತ ಅಧಿಕ ಉಷ್ಣಾಂಶ ಕಂಡು ಬಂದವರನ್ನು, ೬೦ ವರ್ಷ ಮೇಲ್ಪಟ್ಟವರನ್ನು, ಮಕ್ಕಳನ್ನು, ಗರ್ಭಿಣಿಯರನ್ನು ವಾಪಸ್ ಕಳಿಸಲಾಯಿತು.ಉಳಿದಂತೆ ದೂರದ ಬೆಂಗಳೂರು,ಮತ್ತು ತುಮಕೂರು ನಗರಗಳಿಗೆ ಮಾತ್ರ ಬಸ್‌ಗಳನ್ನು ಬಿಡಲಾಯಿತು.ಒಂದು ಬಸ್‌ನಲ್ಲಿ ಕೇವಲ ೩೦ ಪ್ರಯಾಣಿಕರಿಗೆ ಮಾತ್ರ ಅವಕಾಶ ನೀಡಲಾಯಿತು.
ಇದಲ್ಲದೆ, ದೂರದ ಊರುಗಳಿಗೆ ತೆರಳುವವರು ಶಿರಾ ನಗರದ ಮುಖ್ಯ ಬಸ್‌ನಿಲ್ದಾಣಕ್ಕೆ ಬಂದೇ ಪ್ರಯಾಣಿಸಬೇಕಿದೆ. ಜೊತೆಗೆ ರಸ್ತೆ ಮಧ್ಯೆ ಪ್ರಯಾಣಿಕರನ್ನು ಹತ್ತಿಸಿಕೊಳ್ಳುವುದಿಲ್ಲ. ಕೇವಲ ಇಳಿಯುವವರಿಗೆ ಮಾತ್ರವೇ ಅವಕಾಶ ನೀಡಲಾಗುತ್ತಿದೆ. ಎಂದು ತಿಳಿದು ಬಂದಿದೆ.
ಇನ್ನು ಪ್ರಥಮ ದಿನವಾದ ಇಂದು ಸುಮಾರು ಒಂದು ಗಂಟೆಗೆ ೮ ಬಸ್‌ಗಳು ಶಿರಾ ನಗರದಿಂದ ಪ್ರಯಾಣಿಕರನ್ನು ಕರೆದುಕೊಂಡು ಪ್ರಯಾಣ ಬೆಳಸಿದವು.ಅಲ್ಲದೆ, ದಾವಣಗೆರೆ-ಚಿತ್ರದುರ್ಗ ಕಡೆಯಿಂದ ಹಾಗೂ ಬೆಂಗಳೂರು ಕಡೆಯಿಂದ ಬಂದ ಯಾವುದೇ ಬಸ್‌ಗಳು ನಗರದ ಒಳಗಡೆ ಸಂಚಾರ ನಡೆಸಲಿಲ್ಲ.
ಇದನ್ನು ಹೊರತುಪಡಿಸಿ ಈ ಹಿಂದೆ ಶಿರಾಕ್ಕೆ ಬಂದಿದ್ದ ಮಹಾರಾಷ್ಟ್ರದ ಸುಮಾರು ೧೧ ಜನ ಕಾರ್ಮಿಕರು ಇಂದು ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.

ಶ್ರೀಮಂತ್ ಕುಮಾರ್ ಎಕ್ಸ್ ಪ್ರೆಸ್ ಟಿವಿ ಶಿರಾ(ತುಮಕೂರು)

Continue Reading

ಆರೋಗ್ಯ / HEALTH

ದಾವಣಗೆರೆ ಜಿಲ್ಲಾಡಳಿತಕ್ಕೆ 6 ಸಾವಿರ ಮೆಡಿಸನ್ ಕಿಟ್ ಹಸ್ತಾಂತರಿಸಿದ ನಮ್ಮ ಹೋಮಿಯೋಪತಿ

Published

on

ದಾವಣಗೆರೆ : ಕೊರೊನಾ ವೈರಸ್ ತಡೆಗಟ್ಟುವ ಸಲುವಾಗಿ ಹಗಲು ರಾತ್ರಿ ಕೆಲಸ ನಿರ್ವಹಿಸುತ್ತಿರುವ ಆರೋಗ್ಯ,ಪೊಲೀಸ್ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು,ಪಾಲಿಕೆ ಸಿಬ್ಬಂದಿ ಹಾಗೂ ಆಡಳಿತ ಸಿಬ್ಬಂದಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನಮ್ಮ ವೈದ್ಯ ಶಾಲಾ ಪ್ರೆöÊ.ಲಿ.,ನ ನಮ್ಮ ಹೋಮಿಯೋಪತಿ ಸಂಸ್ಥೆವತಿಯಿ0ದ ಮೆಡಿಸನ್ ಕಿಟ್‌ಗಳನ್ನು ವಿತರಿಸಲಾಗಿದೆ.

ಅಂದ ಹಾಗೇ ದಾವಣಗೆರೆಯಲ್ಲಿ ನಮ್ಮ ಹೋಮಿಯೋಪತಿ ಸಂಸ್ಥೆ ಸುಮಾರು ೬ ಸಾವಿರ ಮೆಡಿಸನ್ ಕಿಟ್‌ಗಳನ್ನು ಜಿಲ್ಲಾಧಿಕಾರಿ ಡಿಸಿ ಮಹಾಂತೇಶ್ ಆರ್. ಬೀಳಗಿ ಅವರಿಗೆ ಹಸ್ತಾಂತರಿಸಲಾಯಿತು.

ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ,ಜಿಲ್ಲಾ ಆಯುಷ್ ಅಧಿಕಾರಿ ಡಾ.ಶಂಕರ್ ಗೌಡ, ನಮ್ಮ ವೈದ್ಯ ಶಾಲಾ ಪ್ರೆöÊ.ಲಿ.,ನ ನಿರ್ದೇಶಕ ಡಾ.ಮಂಜುನಾಥ್ ಸೇರಿದಂತೆ ನಮ್ಮ ಹೋಮಿಯೋಪತಿ ಸಂಸ್ಥೆ ಸಿಬ್ಬಂದಿ ಹಾಜರಿದ್ದರು.

ಇದೇ ವೇಳೆ ದಾವಣಗೆರೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಶ್ರಮಿಸುತ್ತಿರುವ ಆರೋಗ್ಯ,ಪೊಲೀಸ್ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಪಾಲಿಕೆ ಸಿಬ್ಬಂದಿ ಹಾಗೂ ಆಡಳಿತ ಸಿಬ್ಬಂದಿಗಳಿಗೆ ಈ ಕಿಟ್ ಹೆಚ್ಚಿನ ಉಪಯೋಗವಾಗಲಿದೆ ಎಂದು ನಮ್ಮ ವೈದ್ಯ ಶಾಲಾ ಪ್ರೆöÊ.ಲಿ.,ನ ನಿರ್ದೇಶಕ ಡಾ.ಮಂಜುನಾಥ್ ತಿಳಿಸಿದ್ದಾರೆ.

ನ್ಯೂಸ್ ಬ್ಯೂರೋ ಎಕ್ಸ್ ಪ್ರೆಸ್ ಟಿವಿ ದಾವಣಗೆರೆ

Continue Reading

Trending

Copyright © 2023 EXPRESS TV KANNADA

yaş sınırı olmayan bahis sitelerikareasbetdeneme bonusu veren sitelertürbanlı escortsiyah bayrak ayna amirkareasbet girişbakırköy escortkareasbetbetingo güncel girişdizimatFındıkzade EscortBitcoin Kabul Eden Bahis Sitelerigüvenilir casino sitelerigobahis girişasper casino girişesbet girişbullbahis girişbenimbahis girişbenimbahisGüvenilir poker siteleriSüper Ligizmir escortBakırköy Escortyabancı diziesenyurt escortistanbul escortbeylikdüzü escortbeylikduzu escortbeylikduzu escortbahceşehir escortbeylikdüzü escortesenyurt escortbeylikdüzü escortbeylikdüzü escortistanbul escort30 TL Bonus Veren Bahis Siteleri betmatikmariobetonwinbetistsüpertotobetgrandpashabet telegramBetist Girişbullbahisbullbahisen iyi slot sitelerixslot giriş adresitipobet365ilk yatırım bonusu veren sitelerizmir travestiPHP Shell indirbetturkeybetturkeybetparkstarzbetjojobetbetparkbetistmarsbahismarsbahis girişdeneme bonusu veren sitelerdeneme bonusu veren sitelerBets10 GirişBahis Siteleribetturkeybetturkeybetturkey girişbetturkeystarzbet