ದಾವಣಗೆರೆ : ವೈರಸ್ ಹರಡುತ್ತಿರುವುದು ಒಂದು ರೀತಿಯ ಭಯೋತ್ಪಾದನೆ ಇದ್ದಂತೆ, ಅವರೆಲ್ಲ ದೇಶದ್ರೋಹಿಗಳು.ಹೀಗಾಗಿ ತಬ್ಲಿಘಿ ಸಮಾವೇಶಕ್ಕೆ ಹೋಗಿ ಚಿಕಿತ್ಸೆ ಪಡೆಯವದವರನ್ನು ಗುಂಡಿಟ್ಟು ಕೊಲ್ಲಬೇಕು ಅಂತ ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಹರಿಹಾಯ್ದಿದ್ದಾರೆ.
ದಾವಣಗೆರೆಯಲ್ಲಿ ಮಾತನಾಡಿದ ಅವರು,ದೆಹಲಿಯ ನಿಜಾಮುದ್ದೀನ್ ತಬ್ಲಿಘಿ ಜಮಾತ್ ಸಭೆಯಲ್ಲಿ ಭಾಗವಹಿಸಿದ್ದರು ಆಸ್ಪತ್ರೆಗೆ ಬನ್ನಿ ಎಂದು ಪ್ರಧಾನಿ, ಸಿಎಂ ಈಗಾಗಲೇ ಸಾಕಷ್ಟು ಬಾರಿ ಮನವಿ ಮಾಡಿದ್ದಾರೆ. ಆದರೆ ಕೆಲವರು ಉದ್ದೇಶ ಪೂರ್ವಕವಾಗಿ ಈ ರೀತಿಯಾಗಿ ಮಾಡಿದ್ದಾರೆ ಅಂತ ಕಿಡಿಕಾರಿದರು.
ತಬ್ಲಿಘಿ ಸಮಾವೇಶಕ್ಕೆ ಹೋಗಿ ಬಂದವರು ಚಿಕಿತ್ಸೆ ಪಡೆಯದೇ ಎಸ್ಕೇಪ್ ಆಗುತ್ತಿದ್ದರೋ ಅವರನ್ನು ಯಾರೂ ರಕ್ಷಣೆ ಮಾಡಬಾರದು. ಅವರನ್ನು ಗುಂಡಿಟ್ಟು ಕೊಲೆ ಮಾಡಿದರೂ ತಪ್ಪಿಲ್ಲ. ಎಲ್ಲಾ ಅಲ್ಪಸಂಖ್ಯಾತರು ಭಯೋತ್ಪಾದಕರಲ್ಲ, ದೇಶದ್ರೋಹಿಗಳು ಅಲ್ಲ ಅಂತ ಹೇಳಿದರು.
ನ್ಯೂಸ್ ಬ್ಯೂರೋ ಎಕ್ಸ್ ಪ್ರೆಸ್ ಟಿವಿ ದಾವಣಗೆರೆ