ತುಮಕೂರು: ಜಿಲ್ಲೆಯ ತಿಪಟೂರು ನಗರದಲ್ಲಿ ಕೆಲ ಕಡೆ ಜನರು ಗುಂಪಾಗಿ ಸಂಚರಿಸುವುದು ಹಾಗೂ ಅಗತ್ಯ ವಸ್ತುಗಳಿಗಾಗಿ ಮುಗಿಬೀಳುತ್ತಿರುವುದು ಕಂಡು ಬಂದಿದೆ.
ಇದರ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿಕೃಷ್ಣ ಅವರು ತಿಪಟೂರು ನಗರಕ್ಕೆ ಭೇಟಿ ನೀಡಿ, ಕೊರೊನಾ ಕುರಿತು ಜಾಗೃತಿ ಮೂಡಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಅವರು,ಸರ್ಕಾರದ ನಿಯಮಗಳನ್ನು ಪಾಲಿಸುವಂತೆ ಮನವಿ ಮಾಡಿದರು.
ಅಲ್ಲದೆ, ಕೊರೊನಾ ಸೋಂಕಿನ ಬಗ್ಗೆ ಯಾವುದೇ ಭಯ ಬೇಡ. ಅರಿವು ಬೆಳೆಸಿಕೊಳ್ಳಿ. ಸರ್ಕಾರ ವಿಧಿಸುವ ನಿಯಮಗಳನ್ನು ಚಾಚು ತಪ್ಪದೇ ಪಾಲಿಸಿ ಎಂದು ತಿಳಿಸಿದರು.
ನ್ಯೂಸ್ ಬ್ಯೂರೋ ಎಕ್ಸ್ ಪ್ರೆಸ್ ಟಿವಿ ತುಮಕೂರು