ದೇಶ - ವಿದೇಶ

ಲಾಕ್‌ಡೌನ್‌ಗೆ ವಿರೋಧ ಇಲ್ಲ, ಸಾಲ ತೀರಿಸಲು ಹೇಗೆ..?

Published

on

ಬೆಂಗಳೂರು:ಪ್ರಧಾನಿ ನರೇಂದ್ರ ಮೋದಿ ಅವರು ಮೇ.೩ರವರೆಗೆ ಲಾಕ್ ಡೌನ್ ಅವಧಿ ವಿಸ್ತರಣೆ ಮಾಡಿದ್ದು,ಈ ಕುರಿತು ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಎರಡನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ೨ ನೇ ಬಾರಿಗೆ ಮೇ. ೩ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಿರುವುದಕ್ಕೆ ನಮ್ಮ ವಿರೋಧ ಇಲ್ಲ.ಆದರೆ ಲಾಕ್‌ಡೌನ್‌ನಿಂದ ಸಂಕಷ್ಟದಲ್ಲಿರುವ ರೈತ ವರ್ಗ ಮತ್ತು ದಿನಗೂಲಿ ಸಮುದಾಯಕ್ಕೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕಿತ್ತು ಎಂದು ಹೇಳಿದರು.
ರೈತರು, ದಿನ ನಿತ್ಯ ಕೂಲಿ ಮಾಡುವವರಿಗೆ ಮೋದಿ ತಮ್ಮ ಭಾಷಣದಲ್ಲಿ ಏನನ್ನು ಘೋಷಣೆ ಮಾಡಿಲ್ಲ. ಲಾಕ್ ಡೌನ್ ಘೋಷಣೆ ಮಾಡಿ ಎಲ್ಲ ವಹಿವಾಟು ಸ್ಥಗಿತಗೊಳಿಸಿದ ಮೇಲೆ ಸಾಲ ತೀರಿಸಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.
ಜೊತೆಗೆ ಲಾಕ್ ಡೌನ್ ಅವಧಿ ಮುಗಿದ ಮೇಲೆ ಬಡ್ಡಿ ಸಮೇತ ಸಾಲ ತೀರಿಸಲು ಸಾಧ್ಯವಾಗುವುದಿಲ್ಲ. ಹಾಗಾಗಿ ಕೃಷಿ ಸಾಲವನ್ನೇ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.

ನ್ಯೂಸ್ ಬ್ಯೂರೋ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Click to comment

Trending

Exit mobile version