ಆರೋಗ್ಯ / HEALTH

ಸಿಎಂ ಪರಿಹಾರ ನಿಧಿಗೆ ಮಾನಪ್ಪ ವಜ್ಜಲ್ 5 ಲಕ್ಷ ದೇಣಿಗೆ

Published

on

ರಾಯಚೂರು: ಕೊರೊನಾ ವೈರಸ್ ತಡೆಗೆ ಸರ್ಕಾರ ಕೈಗೊಂಡಿರುವ ಅಗತ್ಯ ಸೌಲಭ್ಯಗಳಿಗೆ ನೆರವಾಗಲು ಮುಖ್ಯಮಂತ್ರಿ ಪರಿಹಾರ ನಿಧಿಗೆ ದೇಣಿಗೆ ಹರಿದು ಬರುತ್ತಿದೆ. ಶಾಸಕರು,ಸಂಸದರು ಹೀಗೆ ಎಲ್ಲರೂ ಸಿಎಂ ಪರಿಹಾರ ನಿಧಿಗೆ ದೇಣಿಗೆ ನೀಡುತ್ತಿದ್ದಾರೆ.
ಇದೀಗ ರಾಯಚೂರು ಜಿಲ್ಲೆಯ ಲಿಂಗಸೂಗೂರು ಮಾಜಿ ಶಾಸಕ ಮಾನಪ್ಪ ವಜ್ಜಲ್ ಕೂಡ ಸಿಎಂ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದಾರೆ.
ಅಂದ ಹಾಗೇ ಸಿಎಂ ಯಡಿಯೂರಪ್ಪರನ್ನು ಭೇಟಿಯಾದ ಲಿಂಗಸೂಗೂರು ಮಾಜಿ ಶಾಸಕ ಮಾನಪ್ಪ ವಜ್ಜಲ್ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ೫ ಲಕ್ಷ ರೂ.ಚೆಕ್‌ನ್ನು ದೇಣಿಗೆಯಾಗಿ ಹಸ್ತಾಂತರಿಸಿದರು.

ವೀರೇಶ್ ಅರಮನಿ ಎಕ್ಸ್ ಪ್ರೆಸ್ ಟಿವಿ ಲಿಂಗಸೂಗೂರು

Click to comment

Trending

Exit mobile version