ಮುಂಡರಗಿ(ಗದಗ): ಲಾಕ್ಡೌನ್ ಹಿನ್ನೆಲೆಯಲ್ಲಿ ರಾಜ್ಯದ ರೈತರು ಬೆಳದ ಫಸಲನ್ನು ಮಾರುಕಟ್ಟೆಗೆ ತಲುಪಿಸಲಾಗದೆ ಕಂಗೆಟ್ಟು ಹೋಗಿದ್ದಾರೆ. ಆದರೆ ಇದರ ನಡುವೆಯೇ ಗದಗ ಜಿಲ್ಲೆಯಲ್ಲಿ ಸುರಿದ ಅಕಾಲಿಕ ಮಳೆ ರೈತರನ್ನು ಮತ್ತಷ್ಟು ಕಂಗಾಲು ಮಾಡಿದೆ.
ಸದ್ಯ ಈ ಜಿಲ್ಲೆಯ ಮುಂಡರಗಿ ತಾಲೂಕಿನ ಮುಂಡವಾಡ ಗ್ರಾಮದಲ್ಲಿ ಸುರಿದ ಮಳೆಯಿಂದಾಗಿ ಗ್ರಾಮದ ರೈತ ರಮೇಶ ಕಳಕರೆಡ್ಡಿ ಅವರ ಮಾವು ಬೆಳೆ ಸಂಪೂರ್ಣ ನೆಲ ಕಚ್ಚಿದೆ. ಬಿರುಗಾಳಿ ರಭಸಕ್ಕೆ ಸುಮಾರು ೨ ಟನ್ ನಷ್ಟು ಮಾವು ಹಾಳಾಗಿದೆ.ಸಾಲ ಮಾಡಿ ೮ ಎಕರೆ ಮಾವಿನ ಬೆಳೆದಿದ್ದ ರಮೇಶ್, ಈ ಬಾರಿ ಲಕ್ಷಾಂತರ ರೂಪಾಯಿ ಲಾಭದ ನಿರೀಕ್ಷೆಯಲ್ಲಿದ್ದರು. ಆದರೆ ಈಗ ಎಲ್ಲವೂ ಕೊಚ್ಚಿಕೊಂಡು ಹೋಗಿದೆ.ಒಂದೆಡೆ ಕೊರೊನಾ ಸಂಕಟ, ಇತ್ತ ಪ್ರಕೃತಿ ಹೊಡೆತದಿಂದ ಸಂಕಷ್ಟದಲ್ಲಿರುವ ರೈತರತ್ತ ಇನ್ನಾದರೂ ಸರ್ಕಾರ ಗಮನ ಹರಿಸಬೇಕಾಗಿದೆ.
ನ್ಯೂಸ್ ಬ್ಯೂರೋ ಎಕ್ಸ್ ಪ್ರೆಸ್ ಟಿವಿ ಗದಗ