ಆರೋಗ್ಯ / HEALTH

ಬೆಂಗಳೂರಿನಲ್ಲಿ 6000 ಬಡಜನರಿಗೆ ದಿನಸಿ ಕಿಟ್ ವಿತರಿಸಿದ ಹೆಚ್‌ಡಿಕೆ, ಪ್ರಸಾದ್ ಬಾಬು

Published

on

ಬೆಂಗಳೂರು:ಸರ್ಕಾರ ಹಲವಾರು ತಪ್ಪುಗಳನ್ನು ಮಾಡಿದ್ದು, ಕೊರೋನಾ ವೈರಸ್ ವಿಚಾರದಲ್ಲಿ ರಾಜ್ಯ ಸರ್ಕಾರ ಹಲವಾರು ತಪ್ಪುಗಳನ್ನು ಮಾಡಿದ್ದು,ಇಂತಹ ಸಂಕಷ್ಟ ಸಂದರ್ಭದಲ್ಲಿ ರಾಜಕೀಯ ಮಾಡಲು ಬಯಸುವುದಿಲ್ಲ. ಜನರ ಜೀವನದ ಜತೆ ಚೆಲ್ಲಾಟವಾಡಿದರೆ ಸುಮ್ಮನಿರುವುದೂ ಇಲ್ಲ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರ ಸ್ವಾಮಿ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಮುಖಂಡ ಪ್ರಸಾದ್ ಬಾಬು(ಕಬಡ್ಡಿ ಬಾಬು)ತಮ್ಮ ಸ್ವಂತ ಹಣದಿಂದ ಕ್ಷೇತ್ರದ ಸುಮಾರು ೬೦೦೦ ಬಡಜನರಿಗೆ ಅಗತ್ಯ ದಿನಸಿ ಪದಾರ್ಥದ ಕಿಟ್ ವಿತರಿಸುವ ಕಾರ್ಯಕ್ಕೆ ಚಾಲನೆ ವೇಳೆ ಮಾತನಾಡಿದ ಅವರು, ಪಾದರಾಯನಪುರದಲ್ಲಿ ಪುಂಡಾಟಿಕೆ ನಡೆಸಿ ಕ್ವಾರೆಂಟೈನ್‌ಗೆ ಒಳಗಾಗಿರುವರನ್ನು ರಾಮನಗರ ಜೈಲಿಗೆ ಸ್ಥಳಾಂತರಿಸಿ ಮತ್ತೆ ಬೆಂಗಳೂರಿಗೆ ಕರೆ ತಂದಿರುವ ಬೆಳವಣಿಗೆ ಬಗ್ಗೆ ಕೆಂಡ ಮಂಡಲವಾದರು.
ಅಲ್ಲದೆ,ಸರ್ಕಾರದ ತಪ್ಪುಗಳನ್ನು ಬಹಿರಂಗಪಡಿಸಿಲ್ಲ. ಹಾಗೆಂದ ಮಾತ್ರಕ್ಕೆ ಇದು ನಮ್ಮ ದೌರ್ಬಲ್ಯವಲ್ಲ. ಸರ್ಕಾರ ಇಂತಹ ವಿಚಾರದಲ್ಲಿ ಎಚ್ಚರಿಕೆಯಿಂದ ವರ್ತಿಸಬೇಕು.ರಾಮನಗರ ಜೈಲಿಗೆ ಕ್ವಾರೆಂಟೈನ್ ನಲ್ಲಿರುವವರನ್ನು ಕರೆದೊಯ್ದ ಹಿನ್ನೆಲೆಯಲ್ಲಿ ಜೈಲು ಸಿಬ್ಬಂದಿ ಹೆದರಿದ್ದಾರೆ. ತಮಗೆ ಬಂದ ಖಚಿತ ಮಾಹಿತಿ ಪ್ರಕಾರ ಸೋಂಕು ಮೂವರಿಗೆ ವ್ಯಾಪಿಸಿದೆ.ಇಂತಹ ಸಂದರ್ಭದಲ್ಲಿ ಸಚಿವರುಗಳು ಉಡಾಫೆಯಿಂದ ಮಾತನಾಡುವುದು ಸರಿಯಲ್ಲ.ಜನರ ಜೀವದ ವಿಚಾರದಲ್ಲಿ ಸರ್ಕಾರ ವೈಜ್ಞಾನಿಕವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಜೊತೆಗೆ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ್ ಅವರಿಗೆ ನಿಜಕ್ಕೂ ಕಳಕಳಿ ಇದ್ದರೆ ತಮ್ಮ ಕ್ಷೇತ್ರದ ಕೆ.ಸಿ. ಜನರಲ್ ಆಸ್ಪತ್ರೆಗೆ ಇವರನ್ನೆಲ್ಲಾ ದಾಖಲಿಸಬಹುದಿತ್ತು. ಯಾಕೆ ಅವರಿಗೆ ರಾಮನಗರವೇ ಬೇಕಾಯಿತೇ. ಸಚಿವರು ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳಲು ಮಾತನಾಡುವುದು ಸರಿಯಲ್ಲ ಎಂದರು.
ಇದಲ್ಲದೆ, ಪಾದರಾಯನಪುರದ ಆರೋಪಿಗಳನ್ನು ರಾಮನಗರಕ್ಕೆ ಸ್ಥಳಾಂತರಿಸಿರುವ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರಿಗೆ ಸರ್ಕಾರ ಮಾಹಿತಿ ನೀಡಿಲ್ಲ. ಕೆಲವರನ್ನು ಕತ್ತಲಲ್ಲಿಟ್ಟಿದೆ ಎಂದು ಕುಮಾರ ಸ್ವಾಮಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.
ಇದೇ ವೇಳೆ ಪದ್ಮನಾಭ ನಗರ ವಿಧಾನಸಭಾ ಕ್ಷೇತ್ರದ ಕೆಂಪೇಗೌಡ ಮೆಡಿಕಲ್ ಕಾಲೇಜ್ ಬಳಿ ಅಂತಾರಾಷ್ಟ್ರೀಯ ಕ್ರೀಡಾಪಟು ಹಾಗೂ ಜೆಡಿಎಸ್ ಮುಖಂಡ ಕಬಡ್ಡಿ ಬಾಬು ನೇತೃತ್ವದಲ್ಲಿ ಹಾಗೂ ಆನಂದ ಗುರೂಜಿ ಸಮ್ಮುಖದಲ್ಲಿ ಬಡವರು, ಕಾರ್ಮಿಕರು,ಅರ್ಚಕರು, ನಿರ್ಗತಿಕರಿಗೆ ಪಡಿತರ ವಿತರಿಸಿದರು.
ಅಲ್ಲದೆ,ಲಾಕ್‌ಡೌನ್ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುವ ಮಾನವೀಯ ಗುಣ ಇರುವುದು ಒಳ್ಳೆ ವಿಷಯ. ಇತಂಹ ಕೆಲಸ ಇನ್ನೂ ಹೆಚ್ಚು ಆಗಬೇಕು.ಲಾಕ್‌ಡೌನ್ ನಿಂದ ಸಂಕಷ್ಟಕ್ಕೆ ಸಿಲುಕಿಸುವ ಬಡವರಿಗೆ ಉಳ್ಳವರು ಸ್ಪಂದಿಸುವ ಮೂಲಕ ಬಡವರ ನೆರವಿಗೆ ಬರಬೇಕು ಎಂದು ಹೇಳಿದರು.
ಇದಕ್ಕೂ ಮುನ್ನ ಮಾತನಾಡಿದ ಕಬ್ಬಡ್ಡಿ ಬಾಬು, ಅರ್ಚಕರು, ಬಡವರು, ನಿರ್ಲಕ್ಷಿತ ಸಮುದಾಯದವರಿಗೆ ಒಂದು ತಿಂಗಳಿಗೆ ಬೇಕಾಗುವಷ್ಟು ಆಹಾರ ಕಿಟ್ ಗಳನ್ನು ವಿತರಣೆ ಮಾಡಲಾಯಿತು. ಒಟ್ಟು ೨೫ ಸಾವಿರ ಆಹಾರ ಕಿಟ್ ಗಳನ್ನು ವಿತರಿಸುತ್ತಿದ್ದು,ಇದಕ್ಕಾಗಿ ರಾಣೆಬೆನ್ನೂರಿನಿಂದ ಅಕ್ಕಿ ತರಿಸಲಾಗಿದೆ.ಸುಮಾರು ೩೫ಟನ್ ಅಕ್ಕಿ ಹಾಗೂ ೬ ಟನ್ ಬೆಳೆ, ಗೋಧಿ, ಸಕ್ಕರೆ, ಎಣ್ಣೆ ಹಾಗೂ ಉಪ್ಪು ಮತ್ತಿತರ ವಸ್ತುಗಳನ್ನು ವಿತರಣೆ ಮಾಡಲಾಗುತ್ತಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕತ್ರಿಗುಪ್ಪೆ ಮುನಿರಾಜು,ತ್ಯಾಗರಾಜು,ಸತೀಶ್,ಮುನಿಸ್ವಾಮಿ,ಯೋಗ ಮೂರ್ತಿ,ಕುಮಾರ್ ಮತ್ತಿತರರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ನ್ಯೂಸ್ ಬ್ಯೂರೋ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Click to comment

Trending

Exit mobile version