ಆರೋಗ್ಯ / HEALTH

ಇಂಡಿ ತಾಲ್ಲೂಕಿನ ಆಶಾ ಕಾರ್ಯಕರ್ತೆಯರ ಕಾರ್ಯಕ್ಕೆ ಮೆಚ್ಚುಗೆ

Published

on

ಇಂಡಿ(ವಿಜಯಪುರ): ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಭೀಮಾ ದಡದ ಬುಯ್ಯಾರ ಗ್ರಾಮದಲ್ಲಿ ಆಶಾ ಕಾರ್ಯಕರ್ತೆಯರು ಜನರ ಆರೋಗ್ಯದ ಸ್ಥಿತಿಗತಿಯ ಸಮೀಕ್ಷೆ ನಡೆಸಿ ಮಾಹಿತಿ ಕಲೆಹಾಕಿದರು.
ಈ ವೇಳೆ ಆಶಾ ಕಾರ್ಯಕರ್ತೆಯರಿಗೆ ಗ್ರಾಮ ಪಂಚಾಯತ್ ಸದಸ್ಯ ಹುಚ್ಚಪ್ಪ ಸ್ಯಾನಿಟೈಸರ್ ವಿತರಣೆ ಮಾಡಿದರು.
ಬಳಿಕ ಮಾತನಾಡಿದ ಅವರು, ಆಶಾ ಕಾರ್ಯಕರ್ತೆಯರು ತಮ್ಮ ಆರೋಗ್ಯವನ್ನು ಲೆಕ್ಕಿಸದೇ ಜನರಿಗೆ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಜವಾಬ್ದಾರಿಯುತ ಕಾರ್ಯ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಧನಸಿಂಗ್ ರಾಠೋಡ, ಗ್ರಾಮ ಲೆಕ್ಕಾಧಿಕಾರಿ ಸಿದ್ದು ಪೂಜಾರಿ,ಆರೋಗ್ಯ ಅಧಿಕಾರಿ ಅನಿಲ ರಾಠೋಡ, ಪೊಲೀಸ್ ಸಿಬ್ಬಂದಿ ಸಂಜು ಕಾಂಬಳೆ ಹಾಜರಿದ್ದರು.

ಶಂಕರ್ ಜಮಾದಾರ ಎಕ್ಸ್ ಪ್ರೆಸ್ ಟಿವಿ ಇಂಡಿ(ವಿಜಯಪುರ)

Click to comment

Trending

Exit mobile version