Connect with us

ಆರೋಗ್ಯ / HEALTH

ಕಾಂಗ್ರೆಸ್ ಇಂತಹ ವಿಷಯದಲ್ಲಿ ರಾಜಕೀಯ ಮಾಡಲ್ಲ..

Published

on

ಶಿರಾ(ತುಮಕೂರು): ಕೊರೊನಾ ಮಾರಿ ಅಬ್ಬರಕ್ಕೆ ರೈತರ ಬದುಕು ಕೊಚ್ಚಿ ಹೋಗಿದ್ದು,ಕೂಡಲೇ ಅನ್ನದಾತನ ಸಹಾಯಕ್ಕೆ ಧಾವಿಸಬೇಕು ಎಂದು ಮಾಜಿ ಸಚಿವ ಟಿ.ಬಿ.ಜಯಚಂದ್ರ ಆಗ್ರಹಿಸಿದ್ದಾರೆ.
ಶಿರಾ ನಗರದಲ್ಲಿ ತಮ್ಮ ನಿವಾಸ ಪಡಿತರ ಚೀಟಿ ವಂಚಿತರಿಗೆ ದಿನಸಿ ಕಿಟ್ ವಿತರಿಸಿ ಮಾತನಾಡಿದ ಅವರು, ಚೈನಾದಲ್ಲಿ ಹುಟ್ಟಿದ ಕೊರೊನಾ ವೈರಸ್ ಅಬ್ಬರದಿಂದ ಅನ್ನದಾತ ಕಂಗಲಾಗಿದ್ದಾನೆ.ಬೆಳೆದ ಬೆಳೆಯನ್ನು ಸಾಗಾಟ ಮಾಡಲಾಗದೇ ಲಕ್ಷಾಂತರ ನಷ್ಟವನ್ನು ಎದುರಿಸಬೇಕಾಗಿದೆ.
ನಾಳೆ ಹೇಗೋ ಅನ್ನುವ ಆತಂಕ ರೈತರನ್ನು ಆವರಿಸಿದೆ.ಸರ್ಕಾರದ ಕಡೆಯಿಂದ ಸಿಗಬೇಕಾದ ಸ್ಪಂದನೆ ಸಿಕ್ಕಿಲ್ಲ.ಕೃಷಿ ಇಲಾಖೆಯ ದಿವ್ಯ ನಿರ್ಲಕ್ಷ್ಯದಿಂದ ಅನ್ನದಾತ ಆಕಾಶ ನೋಡುವಂತಾಗಿದೆ. ಈ ನಡುವೆ ಸಂಕಷ್ಟದಲ್ಲಿರುವ ರೈತರ ತನ್ನ ಬೆಳದ ಬೆಳೆಯನ್ನು ಸಾಗಾಟ ಮಾಡದೆ ಸಂಕಷ್ಟ ದಲ್ಲಿ ಇದು ಪರಿಹಾರವನ್ನು ನೀಡಬೇಕು. ತಾಲ್ಲೂಕಿನ ಹಲವಾರು ರೈತರು ಈರುಳ್ಳಿ ಬೆಳೆದು ಸಂಕಷದಲ್ಲಿ ಇದ್ದಾನೆ ಹಿಂದೆ ನಮ್ಮ ಅವದಿಯಲ್ಲಿ ಪರಿಹಾರವನ್ನು ನೀಡಿದ್ದೇವು.ಈಗ ರೈತರಲ್ಲಿ ಹೊಸ ಭರವಸೆ ಹುಟ್ಟು ಹಾಕಬೇಕು ಎಂದರು.
ಲಾಕ್‌ಡೌನ್ ಹಿನ್ನೆಲೆಯಲ್ಲಿ ವೃತ್ತಿ ಆಧಾರಿತ ಸಮುದಾಯಗಳು, ರೈತರು, ಕಾರ್ಮಿಕರು, ಉದ್ದಿಮೆದಾರರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.ಜೊತೆಗೆ ನಗರಕ್ಕೆ ವಾಪಸ್ ಬಂದವರು ಸದ್ಯ ಉದ್ಯೋಗ ಇಲ್ಲದಂತಾಗಿದೆ.ಸದ್ಯ ಕೊರೊನಾ ಪಿಡುಗು ನಾಡಿನ ಮುಂದಿರುವ ಅತಿ ದೊಡ್ಡ ಸವಾಲು.ಮಹಾಮಾರಿ ನಿಯಂತ್ರಣಕ್ಕೆ ಸರ್ಕಾರ ನಡೆಸುತ್ತಿರುವ ಪ್ರಯತ್ನಗಳಿಗೆ ಸಂಪೂರ್ಣ ಸಹಕಾರವನ್ನು ಕಾಂಗ್ರೆಸ್ ನೀಡಲಿದೆ. ಈ ವಿಚಾರದಲ್ಲಿ ರಾಜಕೀಯ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಇನ್ನು ಸೋಂಕು ನಿಯಂತ್ರಿಸುವುದು ಪ್ರಸ್ತುತ ಸರ್ಕಾರದ ಮುಂದಿರುವ ಅತಿ ದೊಡ್ಡ ಸವಾಲಾಗಿದ್ದು, ಸರ್ಕಾರಕ್ಕೆ ಜನರ ಆರೋಗ್ಯ ಕಾಪಾಡುವುದು ಮುಖ್ಯ. ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಕಾಂಗ್ರೆಸ್ ಯಾವುದೇ ರಾಜಕೀಯ ಮಾಡದೇ ಸರ್ಕಾರಕ್ಕೆ ಸಂಪೂರ್ಣ ಸಹಕಾರ ನೀಡಲಿದೆ ಎಂದು ತಿಳಿಸಿದರು.
ಇದಲ್ಲದೆ,ಸಾಂಕ್ರಾಮಿಕ ರೋಗ ನಿವಾರಣೆ ವಿಚಾರವನ್ನು ಜಾತಿ, ಧರ್ಮ ಮತ್ತು ಪಕ್ಷದ ದೃಷ್ಟಿಯಿಂದ ನೋಡಲು ಸಾಧ್ಯವಿಲ್ಲ. ಕೂಲಿ ಮಾಡುವವರಿಂದ ಹಿಡಿದು ಕೂಲಿ ಕೊಡುವವರೂ ಸಮಸ್ಯೆಯಲ್ಲಿ ಸಿಲುಕಿದ್ದಾರೆ. ಎಲ್ಲರನ್ನು ರಕ್ಷಣೆ ಮಾಡುವುದು ಸರ್ಕಾರದ ಮೊದಲ ಆದ್ಯತೆಯಾಗಬೇಕು ಎಂದರು.
ಈ ದಿಸೆಯಲ್ಲಿ ಸರ್ಕಾರ ಏನೇನು ಕ್ರಮ ಕೈಗೊಳ್ಳುವುದೋ ಅದಕ್ಕೆಲ್ಲ ನಮ್ಮ ಸಹಕಾರ ಇರುತ್ತದೆ.ರಾಜ್ಯದಲ್ಲಿ ಹಲವಾರು ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರ ನೆರವಿಗೆ ಸರ್ಕಾರ ತಕ್ಷಣ ಬರಬೇಕಾಗಿದೆ. ಜನರು ತೊಂದರೆಗೆ ಸಿಲುಕಿದ್ದಾರೆ. ಇದಕ್ಕೆಲ್ಲಾ ಸರ್ಕಾರ ತಕ್ಷಣ ಕ್ರಮಕ್ಕೆ ಮುಂದಾಗಬೇಕು. ಮತ್ತು ರೈತರಿಗೆ ಅವಶ್ಯಕತೆ ಸಾಮಗ್ರಿಗಳನ್ನು ಸರಬರಾಜು ಮಾಡಬೇಕು ಎಂದು ಆಗ್ರಹಿಸಿದರು.

ಶ್ರೀಮಂತ್ ಕುಮಾರ್ ಎಕ್ಸ್ ಪ್ರೆಸ್ ಟಿವಿ ಶಿರಾ(ತುಮಕೂರು)

Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ / HEALTH

ಕೊರೊನಾ ರೋಗಿಗಳೊಂದಿಗೆ ಡಾಕ್ಟರ್ ಗಳ ಹಾಡು..ಡ್ಯಾನ್ಸ್..

Published

on

By

ಕಲಬುರಗಿ : ಕೊರೊನಾ ಕಡಿಮೆಯಾದ ಹಿನ್ನಲೆಯಲ್ಲಿ ಕಲಬುರಗಿ ನಗರದ ಬಸವೇಶ್ವರ ಆಸ್ಪತ್ರೆ ವೈದ್ಯರು ಕೊರೊನಾ ರೋಗಿಗಳೊಂದಿಗೆ ಕುಣಿದು ಕುಪ್ಪಳಿಸಿದ್ದಾ

ಅಂದ ಹಾಗೇ ವರನಟ ಡಾ.ರಾಜಕುಮಾರ್ ಅವರ ಸೂಪರ್ ಹಿಟ್ ಚಿತ್ರಗೀತೆ `ನಗುತ್ತಾ..ನಗುತ್ತಾ..ಬಾಳು ನೀನು ಎಂಬ ಹಾಡಿಗೆ’ ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿಗಳು ಸಖತ್ ಸ್ಟೇಫ್ ಹಾಕಿದ್ದಾರೆ..

ಸದ್ಯ ಆಸ್ಪತ್ರೆ ವೈದ್ಯರ ಹಾಡುಗಾರಿಗೆ ಹಾಗೂ ಡ್ಯಾನ್ಸ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದ್ದು, ಸಾರ್ವಜನಿಕರು ಸಹ ಫುಲ್ ಖುಷ್ ಆಗಿದ್ದಾರೆ.

ಇನ್ನು ರಾಜ್ಯದಲ್ಲಿ ಪಾಸಿಟಿವ್ ಸಂಖ್ಯೆಯಲ್ಲಿ ೩೦ನೇ ಸ್ಥಾನಕ್ಕೆ ಕಲಬುರಗಿ ಜಿಲ್ಲೆ ಇಳಿದಿದೆ.ಜೊತೆಗೆ ಬೀದರ್ ಬಿಟ್ಟರೆ ಕಲಬುರಗಿಯಲ್ಲೇ ಅತೀ ಕಡಿಮೆ ಅಂದರೆ ಕೇವಲ ೩.೮%ಗೆ ಪಾಸಿಟಿವ್ ಸಂಖ್ಯೆ ಇಳಿದಿದೆ..

ಉಮೇಶ್ ಅಚಲೇರಿ ಎಕ್ಸ್ ಪ್ರೆಸ್ ಟಿವಿ ಕಲಬುರಗಿ

Continue Reading

ಆರೋಗ್ಯ / HEALTH

ಹತ್ತಲ್ಲ, ಇಪ್ಪತ್ತಲ್ಲ ಐವತ್ತು ಲಕ್ಷ ರೂ. ಬೆಲೆಬಾಳುವ ಔಷಧಿ ದಾನ ಮಾಡಿದ ಅಪರಿಚಿತ..!

Published

on

By

ಹಾವೇರಿ(ರಾಣೆಬೆನ್ನೂರು):ಕೊರೊನಾ ಸಂದರ್ಭದಲ್ಲಿ ರೋಗಿಗಳಿಂದ ಹಿಡಿದು ಬಡವ, ಶಮ್ರಿಕ ಸೇರಿ ಇತರೆ ವರ್ಗದವರಿಗೆ ದಾನಿಗಳು ಮುಂದೆ ಬಂದು ದಾನ ಮಾಡುವುದನ್ನು ನೋಡಿದ್ದೇವೆ.ಆದರೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ಮಾತ್ರ ಅನಾಮಧೇಯ ವ್ಯಕ್ತಿಯೊಬ್ಬರು ಸುಮಾರು ೫೦ ಲಕ್ಷ ರೂಪಾಯಿ ಬೆಲಬಾಳುವ ಔಷಧಿಗಳ ದಾನ ಮಾಡಿ ತೆರೆಮರೆಗೆ ಉಳಿದಿದ್ದಾ

ಅಂದ ಹಾಗೇ ಕೋವಿಡ್‌ಗೆ ಸಂಬAಧಿಸಿದAತೆ ಸುಮಾರು ೫೦ ಲಕ್ಷ ರೂಪಾಯಿ ಮೌಲ್ಯದ ಔಷಧಿಗಳು, ಮಾಸ್ಕ್, ಫೇಸ್ ಶೀಲ್ಡ್, ಮತ್ತು ಇಂಜೆಕ್ಷನ್‌ಗಳನ್ನು ಹೆಸರು ಹೇಳಲು ಇಚ್ಛಿಸದ ದಾನಿಯೊಬ್ಬರು ಹಾವೇರಿ ಜಿಲ್ಲಾಡಳಿತಕ್ಕೆ ಹಸ್ತಾಂತರ ಮಾಡಿದ್ದಾರೆ…

ಸದ್ಯ ಹಾವೇರಿ ಜಿಲ್ಲಾಡಳಿತವು ಶೀಘ್ರದಲ್ಲೇ ಇದನ್ನು ಜಿಲ್ಲೆಯ ಕೋವಿಡ್ ಆಸ್ಪತ್ರೆಗಳು ಮತ್ತು ಕೋವಿಡ್ ಆರೈಕೆ ಕೇಂದ್ರಗಳಿಗೆ ನೀಡಲಿದ್ದು,ಹಾವೇರಿ ಜಿಲ್ಲಾಧಿಕಾರಿ ಆ ಅಪರಿಚಿತ ದಾನಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

 

ಬಸವನಗೌಡ ಎಕ್ಸ್ ಪ್ರೆಸ್ ಟಿವಿ (ರಾಣೆಬೆನ್ನೂರು) ಹಾವೇರಿ

Continue Reading

ಆರೋಗ್ಯ / HEALTH

ಕೊರೊನಾ ಸೋಂಕಿತ ಕುಟುಂಬಗಳಿಗೆ ಔಷಧಿ ಕಿಟ್ ಹಸ್ತಾಂತರ..

Published

on

By

ಮೈಸೂರು(ಪಿರಿಯಾಪಟ್ಟಣ):ಗ್ರಾಮಾAತರ ಪ್ರದೇಶದ ಕೊರೊನಾ ಸೋಂಕಿತ ವ್ಯಕ್ತಿ ಹಾಗೂ ಅವರ ಕುಟುಂಬಗಳಿಗೆ  ಔಷಧಿ ಕಿಟ್ ವಿತರಿಸಿ ಆತ್ಮಸ್ಥೈರ್ಯ ತುಂಬಲು ಗ್ರಾಮ ಪಂಚಾಯಿತಿವಾರು ತೆರಳುತ್ತಿದ್ದೇನೆ ಎಂದು ಪಿರಿಯಾಪಟ್ಟಣ ಶಾಸಕ ಕೆ.ಮಹದೇವ್ ತಿಳಿಸಿದ್ದಾ

ಪಿರಿಯಾಪಟ್ಟಣ ತಾಲೂಕಿನ ಪುರಸಭಾ ಕಚೇರಿಯಲ್ಲಿ ಸಾರ್ವಜನಿಕರಿಗೆ ವಿತರಿಸಲು ಪುರಸಭಾ ಸಾಮಾನ್ಯ ನಿಧಿಯಿಂದ ಸುಮಾರು ೩ ಲಕ್ಷ ರೂಪಾಯಿ ವೆಚ್ಚದ ಔಷಧಿ ಕಿಟ್‌ಗಳನ್ನು ತಾಲೂಕು ಆಡಳಿತಕ್ಕೆ ಹಸ್ತಾಂತರಿಸಿ ಮಾತನಾಡಿದ ಅವರು, ಕೊರೊನಾ ಸಂಕಷ್ಟ ಕಾಲದಲ್ಲಿ ಪಕ್ಷಭೇದ ಮರೆತು ರಾಜಕೀಯ ಮಾಡದೆ ಈ ಕೆಲಸ ನಿರ್ವಹಿಸುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಇನ್ನು ಪುರಸಭಾ ಅಧ್ಯಕ್ಷ ಮಂಜುನಾಥ್ ಸಿಂಗ್ ಮಾತನಾಡಿ,ಕೊರೊನಾ ರೋಗವನ್ನು ನಿರ್ಮೂಲ ಮಾಡಲು ಸರ್ಕಾರದ ಜೊತೆ ಸ್ಥಳೀಯ ಸಂಸ್ಥೆಗಳು ಸಾರ್ವಜನಿಕರು ಸಹಕರಿಸಬೇಕೆಂದು ತಿಳಿಸಿದರು.

ಇದೇ ವೇಳೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೃಷ್ಣಕುಮಾರ್ ಮಾತನಾಡಿ, ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿ ಇದ್ದವರು ಪಂಚ ಸೂತ್ರಗಳನ್ನು ಪಾಲಿಸಿದರೆ ಯಾವುದೇ ರೋಗ ಬಾಧಿಸುವುದಿಲ್ಲ ಆ ನಿಟ್ಟಿನಲ್ಲಿ ಪುರಸಭೆಯ ಸದಸ್ಯರು ರೋಗ ನಿರ್ಮೂಲ ಮಾಡಲು ಹೆಚ್ಚು ಗಮನಹರಿಸಬೇಕು ಎಂದರು.

ತಾಲೂಕು ಆರೋಗ್ಯಧಿಕಾರಿ ಡಾ ಶರತ್ ಬಾಬು ಮಾತನಾಡಿ,ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿತ ವ್ಯಕ್ತಿಗಳು ಹಾಗೂ ಪ್ರಾಥಮಿಕ  ಸಂಪರ್ಕದಲ್ಲಿ ಇದ್ದ ರೋಗಿಗಳಿಗೆ ಆರೋಗ್ಯ ಇಲಾಖೆ ಸೂಚಿಸಿದ ಮಾತ್ರೆಗಳನ್ನು ನೀಡಬೇಕು.ಈಗಾಗಲೇ ಸುತ್ತೋಲೆಯನ್ನು ಹೊರಡಿಸಲಾಗಿದೆ.ಸುತ್ತೋಲೆ ಉಲ್ಲಂಘಿಸಿದರೆ ಅಂತಹ ಆಸ್ಪತ್ರೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಚ್ಚರಿಕೆ ನೀಡಿದರು.

ಇದೇ ವೇಳೆ ಕಾರ್ಯಕ್ರಮದಲ್ಲಿ ತಾಲೂಕು ದಂಡಾಧಿಕಾರಿ ಚಂದ್ರಮೌಳಿ, ಪುರಸಭಾ ಮುಖ್ಯಾಧಿಕಾರಿ ಪ್ರಸನ್ನಕುಮಾರ್, ಪುರಸಭೆ ಸದಸ್ಯರುಗಳು ಆರೋಗ್ಯ ಇಲಾಖೆ ಸಿಬ್ಬಂದಿಗಳು ಹಾಜರಿದ್ದರು.

 

ರಾಮೇಗೌಡ ಎಕ್ಸ್ ಪ್ರೆಸ್ ಟಿವಿ (ಪಿರಿಯಾಪಟ್ಟಣ) ಮೈಸೂರು

Continue Reading

Trending

Copyright © 2023 EXPRESS TV KANNADA

yaş sınırı olmayan bahis sitelerikareasbetdeneme bonusu veren sitelertürbanlı escortsiyah bayrak ayna amirkareasbet girişbakırköy escortkareasbetbetingo güncel girişdizimatFındıkzade EscortBitcoin Kabul Eden Bahis Sitelerigüvenilir casino sitelerigobahis girişasper casino girişesbet girişbullbahis girişbenimbahis girişbenimbahisGüvenilir poker siteleriSüper Ligizmir escortBakırköy Escortyabancı diziesenyurt escortistanbul escortbeylikdüzü escortbeylikduzu escortbeylikduzu escortbahceşehir escortbeylikdüzü escortesenyurt escortbeylikdüzü escortistanbul escort30 TL Bonus Veren Bahis Siteleri betmatikmariobetonwinbetistsüpertotobetgrandpashabet telegramBetist Girişbullbahisbullbahisen iyi slot sitelerixslot giriş adresitipobet365ilk yatırım bonusu veren sitelerizmir travestiPHP Shell indirbetturkeybetturkeybetparkjojobetbetparkbetistmarsbahismarsbahis girişdeneme bonusu veren sitelerdeneme bonusu veren sitelerBahis Siteleribetturkeybetturkeybetturkey girişbetturkeyBinance Kayıt OlmaBetnano girişPusulabetsuperbetinbetturkeyporn moviecasibom