Connect with us

ಆರೋಗ್ಯ / HEALTH

ಬಿಪಿಎಲ್ ಕಾರ್ಡ್ ದಾರರಿಗೆ ಉಚಿತ ಔಷಧ

Published

on

ಬೆಂಗಳೂರು: ಆರೋಗ್ಯ ಕೇಂದ್ರಗಳನ್ನು ಸದೃಢಗೊಳಿಸುವ ಬಿಬಿಎಂಪಿ ಹೆಲ್ತ್ ಕೇರ್ ಅಡಿಯಲ್ಲಿ ನಗರದ ಆರೋಗ್ಯ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ತರಲಾಗುವುದು ಎಂದು ಡಿಸಿಎಂ ಡಾ. ಸಿ.ಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಪಾಲಿಕೆ ಸಭಾಂಗಣದಲ್ಲಿ ಆರೋಗ್ಯ ಅಧಿಕಾರಿಗಳ ಜತೆ ಸಭೆ ನಡೆಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು,ಆರೋಗ್ಯ ವ್ಯವಸ್ಥೆಯಲ್ಲಿ ಸುಧಾರಣೆ ತರಲು ಈ ಹಿಂದೆ ಮಾಡಿದ್ದ ಪ್ರಸ್ತಾವನೆಗಳ ಪರಿಶೀಲನೆಗೆ ಇಂದು ಸಭೆ ನಡೆಸಲಾಯಿತು ಎಂದರು.
ಬಿಬಿಎಂಪಿ ಆರೋಗ್ಯ ಕೇಂದ್ರಗಳನ್ನು ಪೂರ್ಣ ಪ್ರಮಾಣದಲ್ಲಿ ಸದೃಢಗೊಳಿಸುವ ಯೋಜನೆಯೇ ಬಿಬಿಎಂಪಿ ಹೆಲ್ತ್ ಕೇರ್.ಆ ಮೂಲಕ ಆರೋಗ್ಯ ಕೇಂದ್ರಗಳಲ್ಲಿ ರೋಗ ತಡೆಗೆ ಮುನ್ನೆಚ್ಚರಿಕಾ ಕ್ರಮಗಳ ಪಾಲನೆ ಹಾಗೂ ಪ್ರಾಥಮಿಕ ಮಟ್ಟದ ಚಿಕಿತ್ಸೆ,ಎಲ್ಲ ಕಾಯಿಲೆಗಳಿಗೂ ಔಷಧ ಹಾಗೂ ರೋಗ ಪತ್ತೆ, ತಪಾಸಣೆಗೆ ಲ್ಯಾಬ್ ವ್ಯವಸ್ಥೆ ಇರುವಂತೆ ನೋಡಿಕೊಳ್ಳಲಾಗುವುದು ಎಂದು ತಿಳಿಸಿದರು.
ಬಿಬಿಎಂಪಿ ಹೆಲ್ತ್ ಕೇರ್ ಪರಿಪೂರ್ಣ ಆರೋಗ್ಯ ವ್ಯವಸ್ಥೆಯಾಗಿದ್ದು, ನಗರದಲ್ಲಿ ಅಗತ್ಯ ಇರುವ ಎಲ್ಲರಿಗೂ ಉತ್ತಮ ಆರೋಗ್ಯ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು ೨೪/೭ ತೆರದಿರಬೇಕು. ಎಲ್ಲ ವೇಳೆಯಲ್ಲೂ ಜನರಿಗೆ ಅಗತ್ಯ ಚಿಕಿತ್ಸೆ ದೊರೆಯಬೇಕು. ಇದಕ್ಕಾಗಿ ಟೆಲಿ ಮೆಡಿಸನ್, ಟೆಲಿ ಕನ್ಸಲ್ಟೇಷನ್ ಸೌಲಭ್ಯದೊಂದಿಗೆ ದಾದಿಯರು ಎಲ್ಲ ಸಮಯದಲ್ಲೂ ಕೆಲಸ ನಿರ್ವಹಿಸುವಂತಿರಬೇಕು. ಎಲ್ಲ ರೀತಿಯ ಪರೀಕ್ಷೆ ನಡೆಸಲು ಪ್ರಯೋಗಾಲಯಗಳು ಸಜ್ಜಾಗಿರಬೇಕು.ಯಾವುದೇ ಸಬೂಬು ಹೇಳದೇ ೬೦ ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ಬಿಪಿಎಲ್ ಕಾರ್ಡ್ದಾರರಿಗೆ ಉಚಿತವಾಗಿ ಔಷಧ ಒದಗಿಸಬೇಕು.ಜತಗೆ,ಎಲ್ಲ ಕೇಂದ್ರಗಳಲ್ಲಿ ತಜ್ಞ ವೈದ್ಯರು ಲಭ್ಯ ಇರಬೇಕು ಎಂದು ಸಂಬAಧಿಸಿದವರಿಗೆ ಸೂಚಿಸಲಾಗಿದೆ ಎಂದು ವಿವರಿಸಿದರು.
ಆರೋಗ್ಯ ಕೇಂದ್ರಗಳಲ್ಲಿ ಔಷಧ ದಾಸ್ತಾನಿಲ್ಲ ಎಂದು ರೋಗಿಗಳನ್ನು ವಾಪಸ್ ಕಳುಹಿಸುವಂತಿಲ್ಲ,ಅಗತ್ಯ ಇರುವಂಥ ಎಲ್ಲ ರೀತಿಯ ಔಷಧಗಳನ್ನು ಒದಗಿಸಬೇಕು.ಈ ನಿಟ್ಟಿನಲ್ಲಿ ಎಲ್ಲ ೧೯೮ ವಾರ್ಡ್ಗಳಲ್ಲಿ ಹಾಗೂ ಎಲ್ಲ ೧೩೩ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಜನ ಔಷಧ ಕೇಂದ್ರಗಳನ್ನು ತೆರೆಯಬೇಕು. ಹಿರಿಯ ನಾಗರಿಕರು ಹಾಗೂ ಬಿಪಿಎಲ್ ಕಾರ್ಡ್ದಾರರಿಗೆ ಉಚಿತ ಔಷಧದ ಜತೆಗೆ ಟೆಸ್ಟ್ ಸೌಲಭ್ಯ ಒದಗಿಸುವಂತೆ ಆರೋಗ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.
ಎಲ್ಲ ೧೩೩ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆರೋಗ್ಯ ವರದಿ ದಾಖಲೆಯ ವ್ಯವಸ್ಥೆ ಆಗಲಿದೆ.ಆಶಾ ಹಾಗೂ ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ತೆರಳಿ ಸಂಗ್ರಹಿಸುವ ಪ್ರತಿ ವ್ಯಕ್ತಿಯ ಆರೋಗ್ಯ ವಿವರಗಳ ದಾಖಲೆ ಸಮರ್ಪಕವಾಗಿ ಆಗಬೇಕು. ಅಲ್ಲದೇ, ಆರೋಗ್ಯ ಕೇಂದ್ರಕ್ಕೆ ಬರುವವರ ವಿವರ, ಕಾಯಿಲೆ ಲಕ್ಷಣ, ಯಾವ ಚಿಕಿತ್ಸೆ, ಔಷಧ ನೀಡಲಾಗಿದೆ ಎಂಬ ಎಲ್ಲ ವಿವರಗಳನ್ನು ದಾಖಲಿಸಬೇಕು.
ಇದಲ್ಲದೇ, ನಗರದ ಎಲ್ಲ ಡಯಾಗ್ನಾಸ್ಟಿಕ್ ಮತ್ತು ಲ್ಯಾಬ್‌ಗಳಲ್ಲಿ ನಡೆಯುವ ಎಲ್ಲ ರೀತಿಯ ಪರೀಕ್ಷೆಗಳು, ಆರೋಗ್ಯ ತಪಾಸಣೆಯ ವಿವರ ಬಿಬಿಎಂಪಿಗೆ ಸಿಗಬೇಕು. ಆರೋಗ್ಯ ವಿಚಾರದಲ್ಲಿ ಆಗುವಂಥ ಯಾವುದೇ ಬೆಳವಣಿಗೆ ಬಗ್ಗೆ ಬಿಬಿಎಂಪಿಗೆ ಸಂಪೂರ್ಣ ಮಾಹಿತಿ ಇರಬೇಕು. ಈ ಸಂಬAಧ ಅಗತ್ಯ ಕ್ರಮ ಕೈಗೊಳ್ಳಲು ತಿಳಿಸಲಾಗಿದೆ ಎಂದು ವಿವರಿಸಿದರು.
ಕೊವಿಡ್ ಹಿನ್ನೆಲೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿರುವ ಕೊರತೆಗಳನ್ನು ಪಟ್ಟಿ ಮಾಡಿ ಅದನ್ನು ಸೂಕ್ತವಾಗಿ ನಿಭಾಯಿಸಲು ಸೂಚಿಸ ಲಾಗಿತ್ತು.ಅದರಂತೆ ಕೈಗೊಂಡಿರುವ ಕ್ರಮಗಳ ಬಗ್ಗೆ ಡಾ.ಅಶ್ವತ್ಥನಾರಾಯಣ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಖರೀದಿ ಮಾಡಿರುವ ಸುರಕ್ಷತಾ ಉಪಕರಣಗಳಾದ ಮಾಸ್ಕ್, ಸ್ಯಾನಿಟೈಸರ್, ಪಿಪಿಇ ಕಿಟ್, ಥರ್ಮಲ್ ಸ್ಕ್ಯಾನರ್‌ಗಳನ್ನು ಆರೋಗ್ಯ ಕೇಂದ್ರಗಳಿಗೆ ಸರಬರಾಜು ಮಾಡಿರುವ ಬಗ್ಗೆ ವಿವರ ಪಡೆದು,ಸಿಬ್ಬಂದಿ ಹೆಚ್ಚಳದ ವಿಷಯವಾಗಿ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಮಾಹಿತಿ ನೀಡಿದ ಅಧಿಕಾರಿಗಳು, ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ನೆಬ್ಯುಲೈಸರ್‌ಗಳ ಜತೆಯಲ್ಲೇ ಆಮ್ಲಜನಕ ಸಿಲಿಂಡರ್ ಗಳು ಲಭ್ಯವಿರುವ ಜತೆಗೆ ಉಸಿರಾಟದ ತೊಂದರೆ ಪ್ರಕರಣಗಳಿಗೆ ಮುಂಜಾಗ್ರತಾ ಕ್ರಮವಾಗಿ ಎಲ್ಲ ನಗರ ಪ್ರಾಥಮಿಕ ಹೆರಿಗೆ ಆಸ್ಪತ್ರೆ ಹಾಗೂ ರೆಫರಲ್ ಆಸ್ಪತ್ರೆಗಳಲ್ಲಿ ಆಮ್ಲಜನಕ ವ್ಯವಸ್ಥೆ ಕಲ್ಪಿಸಲು ಕ್ರಿಯಾಯೋಜನೆ ಸಿದ್ಧಪಡಿಸಲಾಗಿದ್ದು,ಮುಂದಿನ ದಿನಗಳಲ್ಲಿ ಅನುಷ್ಠಾನಗೊಳಿಸ ಲಾಗುವುದು ಎಂದು ಹೇಳಿದರು.

ನ್ಯೂಸ್ ಬ್ಯೂರೋ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ / HEALTH

ಕೊರೊನಾ ರೋಗಿಗಳೊಂದಿಗೆ ಡಾಕ್ಟರ್ ಗಳ ಹಾಡು..ಡ್ಯಾನ್ಸ್..

Published

on

By

ಕಲಬುರಗಿ : ಕೊರೊನಾ ಕಡಿಮೆಯಾದ ಹಿನ್ನಲೆಯಲ್ಲಿ ಕಲಬುರಗಿ ನಗರದ ಬಸವೇಶ್ವರ ಆಸ್ಪತ್ರೆ ವೈದ್ಯರು ಕೊರೊನಾ ರೋಗಿಗಳೊಂದಿಗೆ ಕುಣಿದು ಕುಪ್ಪಳಿಸಿದ್ದಾರೆ..

ಅಂದ ಹಾಗೇ ವರನಟ ಡಾ.ರಾಜಕುಮಾರ್ ಅವರ ಸೂಪರ್ ಹಿಟ್ ಚಿತ್ರಗೀತೆ `ನಗುತ್ತಾ..ನಗುತ್ತಾ..ಬಾಳು ನೀನು ಎಂಬ ಹಾಡಿಗೆ’ ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿಗಳು ಸಖತ್ ಸ್ಟೇಫ್ ಹಾಕಿದ್ದಾರೆ..

ಸದ್ಯ ಆಸ್ಪತ್ರೆ ವೈದ್ಯರ ಹಾಡುಗಾರಿಗೆ ಹಾಗೂ ಡ್ಯಾನ್ಸ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದ್ದು, ಸಾರ್ವಜನಿಕರು ಸಹ ಫುಲ್ ಖುಷ್ ಆಗಿದ್ದಾರೆ.

ಇನ್ನು ರಾಜ್ಯದಲ್ಲಿ ಪಾಸಿಟಿವ್ ಸಂಖ್ಯೆಯಲ್ಲಿ ೩೦ನೇ ಸ್ಥಾನಕ್ಕೆ ಕಲಬುರಗಿ ಜಿಲ್ಲೆ ಇಳಿದಿದೆ.ಜೊತೆಗೆ ಬೀದರ್ ಬಿಟ್ಟರೆ ಕಲಬುರಗಿಯಲ್ಲೇ ಅತೀ ಕಡಿಮೆ ಅಂದರೆ ಕೇವಲ ೩.೮%ಗೆ ಪಾಸಿಟಿವ್ ಸಂಖ್ಯೆ ಇಳಿದಿದೆ..

ಉಮೇಶ್ ಅಚಲೇರಿ ಎಕ್ಸ್ ಪ್ರೆಸ್ ಟಿವಿ ಕಲಬುರಗಿ

Continue Reading

ಆರೋಗ್ಯ / HEALTH

ಹತ್ತಲ್ಲ, ಇಪ್ಪತ್ತಲ್ಲ ಐವತ್ತು ಲಕ್ಷ ರೂ. ಬೆಲೆಬಾಳುವ ಔಷಧಿ ದಾನ ಮಾಡಿದ ಅಪರಿಚಿತ..!

Published

on

By

ಹಾವೇರಿ(ರಾಣೆಬೆನ್ನೂರು):ಕೊರೊನಾ ಸಂದರ್ಭದಲ್ಲಿ ರೋಗಿಗಳಿಂದ ಹಿಡಿದು ಬಡವ, ಶಮ್ರಿಕ ಸೇರಿ ಇತರೆ ವರ್ಗದವರಿಗೆ ದಾನಿಗಳು ಮುಂದೆ ಬಂದು ದಾನ ಮಾಡುವುದನ್ನು ನೋಡಿದ್ದೇವೆ.ಆದರೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ಮಾತ್ರ ಅನಾಮಧೇಯ ವ್ಯಕ್ತಿಯೊಬ್ಬರು ಸುಮಾರು ೫೦ ಲಕ್ಷ ರೂಪಾಯಿ ಬೆಲಬಾಳುವ ಔಷಧಿಗಳ ದಾನ ಮಾಡಿ ತೆರೆಮರೆಗೆ ಉಳಿದಿದ್ದಾರೆ.

ಅಂದ ಹಾಗೇ ಕೋವಿಡ್‌ಗೆ ಸಂಬAಧಿಸಿದAತೆ ಸುಮಾರು ೫೦ ಲಕ್ಷ ರೂಪಾಯಿ ಮೌಲ್ಯದ ಔಷಧಿಗಳು, ಮಾಸ್ಕ್, ಫೇಸ್ ಶೀಲ್ಡ್, ಮತ್ತು ಇಂಜೆಕ್ಷನ್‌ಗಳನ್ನು ಹೆಸರು ಹೇಳಲು ಇಚ್ಛಿಸದ ದಾನಿಯೊಬ್ಬರು ಹಾವೇರಿ ಜಿಲ್ಲಾಡಳಿತಕ್ಕೆ ಹಸ್ತಾಂತರ ಮಾಡಿದ್ದಾರೆ…

ಸದ್ಯ ಹಾವೇರಿ ಜಿಲ್ಲಾಡಳಿತವು ಶೀಘ್ರದಲ್ಲೇ ಇದನ್ನು ಜಿಲ್ಲೆಯ ಕೋವಿಡ್ ಆಸ್ಪತ್ರೆಗಳು ಮತ್ತು ಕೋವಿಡ್ ಆರೈಕೆ ಕೇಂದ್ರಗಳಿಗೆ ನೀಡಲಿದ್ದು,ಹಾವೇರಿ ಜಿಲ್ಲಾಧಿಕಾರಿ ಆ ಅಪರಿಚಿತ ದಾನಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

 

ಬಸವನಗೌಡ ಎಕ್ಸ್ ಪ್ರೆಸ್ ಟಿವಿ (ರಾಣೆಬೆನ್ನೂರು) ಹಾವೇರಿ

Continue Reading

ಆರೋಗ್ಯ / HEALTH

ಕೊರೊನಾ ಸೋಂಕಿತ ಕುಟುಂಬಗಳಿಗೆ ಔಷಧಿ ಕಿಟ್ ಹಸ್ತಾಂತರ..

Published

on

By

ಮೈಸೂರು(ಪಿರಿಯಾಪಟ್ಟಣ):ಗ್ರಾಮಾAತರ ಪ್ರದೇಶದ ಕೊರೊನಾ ಸೋಂಕಿತ ವ್ಯಕ್ತಿ ಹಾಗೂ ಅವರ ಕುಟುಂಬಗಳಿಗೆ  ಔಷಧಿ ಕಿಟ್ ವಿತರಿಸಿ ಆತ್ಮಸ್ಥೈರ್ಯ ತುಂಬಲು ಗ್ರಾಮ ಪಂಚಾಯಿತಿವಾರು ತೆರಳುತ್ತಿದ್ದೇನೆ ಎಂದು ಪಿರಿಯಾಪಟ್ಟಣ ಶಾಸಕ ಕೆ.ಮಹದೇವ್ ತಿಳಿಸಿದ್ದಾರೆ.

ಪಿರಿಯಾಪಟ್ಟಣ ತಾಲೂಕಿನ ಪುರಸಭಾ ಕಚೇರಿಯಲ್ಲಿ ಸಾರ್ವಜನಿಕರಿಗೆ ವಿತರಿಸಲು ಪುರಸಭಾ ಸಾಮಾನ್ಯ ನಿಧಿಯಿಂದ ಸುಮಾರು ೩ ಲಕ್ಷ ರೂಪಾಯಿ ವೆಚ್ಚದ ಔಷಧಿ ಕಿಟ್‌ಗಳನ್ನು ತಾಲೂಕು ಆಡಳಿತಕ್ಕೆ ಹಸ್ತಾಂತರಿಸಿ ಮಾತನಾಡಿದ ಅವರು, ಕೊರೊನಾ ಸಂಕಷ್ಟ ಕಾಲದಲ್ಲಿ ಪಕ್ಷಭೇದ ಮರೆತು ರಾಜಕೀಯ ಮಾಡದೆ ಈ ಕೆಲಸ ನಿರ್ವಹಿಸುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಇನ್ನು ಪುರಸಭಾ ಅಧ್ಯಕ್ಷ ಮಂಜುನಾಥ್ ಸಿಂಗ್ ಮಾತನಾಡಿ,ಕೊರೊನಾ ರೋಗವನ್ನು ನಿರ್ಮೂಲ ಮಾಡಲು ಸರ್ಕಾರದ ಜೊತೆ ಸ್ಥಳೀಯ ಸಂಸ್ಥೆಗಳು ಸಾರ್ವಜನಿಕರು ಸಹಕರಿಸಬೇಕೆಂದು ತಿಳಿಸಿದರು.

ಇದೇ ವೇಳೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೃಷ್ಣಕುಮಾರ್ ಮಾತನಾಡಿ, ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿ ಇದ್ದವರು ಪಂಚ ಸೂತ್ರಗಳನ್ನು ಪಾಲಿಸಿದರೆ ಯಾವುದೇ ರೋಗ ಬಾಧಿಸುವುದಿಲ್ಲ ಆ ನಿಟ್ಟಿನಲ್ಲಿ ಪುರಸಭೆಯ ಸದಸ್ಯರು ರೋಗ ನಿರ್ಮೂಲ ಮಾಡಲು ಹೆಚ್ಚು ಗಮನಹರಿಸಬೇಕು ಎಂದರು.

ತಾಲೂಕು ಆರೋಗ್ಯಧಿಕಾರಿ ಡಾ ಶರತ್ ಬಾಬು ಮಾತನಾಡಿ,ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿತ ವ್ಯಕ್ತಿಗಳು ಹಾಗೂ ಪ್ರಾಥಮಿಕ  ಸಂಪರ್ಕದಲ್ಲಿ ಇದ್ದ ರೋಗಿಗಳಿಗೆ ಆರೋಗ್ಯ ಇಲಾಖೆ ಸೂಚಿಸಿದ ಮಾತ್ರೆಗಳನ್ನು ನೀಡಬೇಕು.ಈಗಾಗಲೇ ಸುತ್ತೋಲೆಯನ್ನು ಹೊರಡಿಸಲಾಗಿದೆ.ಸುತ್ತೋಲೆ ಉಲ್ಲಂಘಿಸಿದರೆ ಅಂತಹ ಆಸ್ಪತ್ರೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಚ್ಚರಿಕೆ ನೀಡಿದರು.

ಇದೇ ವೇಳೆ ಕಾರ್ಯಕ್ರಮದಲ್ಲಿ ತಾಲೂಕು ದಂಡಾಧಿಕಾರಿ ಚಂದ್ರಮೌಳಿ, ಪುರಸಭಾ ಮುಖ್ಯಾಧಿಕಾರಿ ಪ್ರಸನ್ನಕುಮಾರ್, ಪುರಸಭೆ ಸದಸ್ಯರುಗಳು ಆರೋಗ್ಯ ಇಲಾಖೆ ಸಿಬ್ಬಂದಿಗಳು ಹಾಜರಿದ್ದರು.

 

ರಾಮೇಗೌಡ ಎಕ್ಸ್ ಪ್ರೆಸ್ ಟಿವಿ (ಪಿರಿಯಾಪಟ್ಟಣ) ಮೈಸೂರು

Continue Reading

Trending

Copyright © 2023 EXPRESS TV KANNADA

canl覺 ma癟 izle selcuksports deneme bonusu deneme bonusu veren siteler bahis siteleri jojobet http://www.iztacalco.cdmx.gob.mx/inicio/guvenilir-bahis-siteleri.html deneme bonusu casino siteleriHacklink SatışıHack forumyaş sınırı olmayan bahis sitelerikareasbetdeneme bonusu veren sitelertürbanlı escortsiyah bayrak ayna amirdeneme bonusu veren sitelerkareasbet girişBursa EscortBakırköy Escort, Ataköy Escortbahis forumkareasbetbetingo güncel girişdizimatFındıkzade Escortbedavabahis.onlineBitcoin Kabul Eden Bahis Sitelerigüvenilir casino siteleridigital marketing agencydeneme bonusu veren sitelergobahis girişasper casino girişhermesbetTelegram Gruplarıistanbul escortesbet girişbullbahis girişbenimbahis girişbenimbahis