ರಾಯಚೂರು: ರಾಯಚೂರಿಗೆ ಆಗಮಿಸಿರುವ ಮುಂಬೈ ವಲಸಿಗರಿಂದ ಕೊರೋನಾ ದಿನೇ ದಿನೇ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂದು ಸಂಜೆ ಜಿಲ್ಲಾಡಳಿತ ಬಿಡುಗಡೆ ಮಾಡಿದ ಸೋಂಕಿತರ ಪಟ್ಟಿಯಲ್ಲಿ ಮತ್ತೆ ದೇವದುರ್ಗದ ೧೦ ಜನಕ್ಕೆ ಪಾಸಿಟಿವ್ ಪ್ರಕರಣಗಳು ದೃಢವಾಗಿವೆ.
ಇಂದು ಕೂಡಾ ಜಿಲ್ಲೆಯಲ್ಲಿ ಬೆಳಗಿನ ಸೋಂಕಿತರ ಪಟ್ಟಿಯಲ್ಲಿ ಯಾವುದೇ ಪ್ರಕರಣಗಳು ಪತ್ತೆಯಾಗಿರಲಿಲ್ಲ.ಆದರೆ ೫ ಗಂಟೆ ಹೆಲ್ತ್ ಬುಲೆಟಿನ್ನಲ್ಲಿ ೧೦ ಜನರಿಗೆ ಕೊರೋನಾ ಪಾಸಿಟಿವ್ ಇರುವುದು ದೃಢವಾಗಿದೆ.
ಈ ಜನರೂ ಕೂಡ ಮಹಾರಾಷ್ಟ್ರದಿಂದ ಬಂದಿರುವವರಾಗಿದ್ದು,ಇವರೆಲ್ಲ ದೇವದುರ್ಗ ತಾಲ್ಲೂಕಿನವರಾಗಿದ್ದಾರೆ.ಇದರಿಂದ ಜಿಲ್ಲೆಯಲ್ಲಿ ಸೋಂಕು ಹರಡಿದವರ ಸಂಖ್ಯೆ ೨೬ ಕ್ಕೆ ಏರಿಕೆಯಾದಂತಾಗಿದೆ. ಸೋಂಕಿತರನ್ನು ಈಗಾಗಲೇ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತುದೆ ಎಂದು ಎ.ವೆಂಕಟೇಶ್ ಕುಮಾರ್ ತಿಳಿಸಿದ್ದಾರೆ.
ವೀರೇಶ್ ಅರಮನಿ ಎಕ್ಸ್ ಪ್ರೆಸ್ ಟಿವಿ ರಾಯಚೂರು