ಅಥಣಿ(ಬೆಳಗಾವಿ): ಅಥಣಿ ತಾಲೂಕಿನ ಐಗಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿವತ್ತು ಕೊರೊನಾ ವಾರಿಯರ್ಸ್ಗಳಿಗೆ ಸನ್ಮಾನ ಮಾಡಲಾಯಿತು.
ಅಂದ ಹಾಗೇ ಮಾದಿಗ ಮೀಸಲಾತಿ ಹೋರಾಟ ಸಮಿತಿ ಹನಮಾಪೂರ ಶಾಖೆ ಅಧ್ಯಕ್ಷ ಸುಕುಮಾರ ಮಾದರ ನೇತೃತ್ವದಲ್ಲಿ ಸನ್ಮಾನ ಕಾರ್ಯಕ್ರಮ ಆಯೊಜಿಸಿಲಾಗಿತ್ತು.
ಇನ್ನು ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಪೂರ್ಣಿಮಾ ಅಂಕಲಗಿ, ಆರೋಗ್ಯ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿಗಳಿಗೆ ಮತ್ತು ಆಶಾ ಕಾರ್ಯಕರ್ತೆಯರಿಗೆ ಸನ್ಮಾನ ನಡೆಸಿರುವುದು ತುಂಬಾ ಸಂತಸ ತಂದಿದೆ ಎಂದರಲ್ಲದೆ, ಸುಕುಮಾರ ಮಾದರ ಅವರಿಗೆ ಧನ್ಯವಾದ ತಿಳಿಸಿದ್ರು..
ಈ ಸಂದರ್ಭದಲ್ಲಿ ಡಾ. ಪ್ರಕಾಶ ಪರ್ನಾಕರ ಸೇರಿದಂತೆ ವೈದ್ಯರು,ಪೊಲೀಸರು ಪತ್ರಕರ್ತರು, ಆಶಾ ಕಾರ್ಯಕರ್ತರು ಹಾಜರಿದ್ದರು.
ಸತೀಶ ಕೋಳಿ ಎಕ್ಸ್ ಪ್ರೆಸ್ ಟಿವಿ ಅಥಣಿ(ಬೆಳಗಾವಿ)