ಜನಸ್ಪಂದನ

ಅಕ್ರಮ ಗಾಂಜಾ ಸಾಗಾಣ..ಆರೋಪಿ ಅರೆಸ್ಟ್..

Published

on

ಸಿಂದಗಿ(ವಿಜಯಪುರ): ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಗಾಂಜಾ ವಶಪಡಿಸಿಕೊಂಡು ಓರ್ವನನ್ನು ಬಂಧಿಸಿರುವ ಘಟನೆ ಸಿಂದಗಿಯ ಚಿಕ್ಕರುಗಿ ಹಿಟ್ಟನಹಳ್ಳಿ ರಸ್ತೆಯ ಕೆನಾಲ್ ಬ್ರಿಡ್ಜ್ ಬಳಿ ನಡೆದಿದೆ.
ಗುರುಸಂಗಪ್ಪ ನೀಲಪ್ಪ ನಾಯ್ಕ್ ವಾಡಿ ಬಂಧಿತ ಆರೋಪಿ.ಈತ ಬಜಾಜ್ ಕಂಪನಿಯ ದ್ವಿಚಕ್ರ ವಾಹನದಲ್ಲಿ ಸುಮಾರು ೯೬೦ ಗ್ರಾಂ ಗಾಂಜಾವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಅಬಕಾರಿ ನಿರೀಕ್ಷಕ ಎ.ಎ.ಮುಜಾವರ್ ನೇತೃತ್ವದ ತಂಡ ದಾಳಿ ನಡೆಸಿದೆ.
ದಾಳಿ ವೇಳೆ ೫೫ ಸಾವಿರ ಮೌಲ್ಯದ ಗಾಂಜಾ ಸಮೇತ ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿ,ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಎಸ್.ಎಸ್.ಅಂಬರೀಶ್ ಎಕ್ಸ್ ಪ್ರೆಸ್ ಟಿವಿ ಸಿಂದಗಿ(ವಿಜಯಪುರ)

Click to comment

Trending

Exit mobile version