ಕೋಲಾರ: ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಎ.ಎಸ್.ಐ ಸಾವನಪ್ಪಿರುವಂತಹ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಹೊರ ಹೊಲಯದಲ್ಲಿ ನಡೆದಿದೆ. ಮೃತಪಟ್ಟಂತಹ ವ್ಯಕ್ತಿ ಶ್ರೀನಿವಾಸಪುರ ಪೋಲಿಸ್ ಠಾಣೆಯ ಎ.ಎಸ್.ಐ 50 ವರ್ಷದ ಮಂಜುನಾಥ್ ಅಂತಾ ಗುರುತಿಸಲಾಗಿದ್ದು. ಕರ್ತವ್ಯ ಮುಗಿಸಿ ತನ್ನ ಸ್ವಂತ ಗ್ರಾಮ ಕೋಲಾರಕ್ಕೆ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದ್ದು, ಅಪಘಾತದಲ್ಲಿ ಗಂಭೀರ ಗಾಯಗಳಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗೆಂದು ಕೋಲಾರದ ಅರ್.ಎಲ್ ಜಾಲಪ್ಪ ಆಸ್ಪತ್ರೆಗೆ ಸಾಗಿಸುವಾಗ ದಾರಿಯಲ್ಲೇ ಮೃತಪಟ್ಟಿದ್ದು, ಶ್ರೀನಿವಾಸಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.