ಮಂಡ್ಯ: ಸಾರ್ವಜನಿಕರ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಲು ಒತ್ತಾಯಿಸಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ವತಿಯಿಂದ ಮಳವಳ್ಳಿ ಪಟ್ಟಣದ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. ಜನವಾದಿ ಮಹಿಳಾ ಸಂಘಟನೆ ರಾಜ್ಯ ಘಟಕ ಅಧ್ಯಕ್ಷೆ ದೇವಿ ನೇತೃತ್ವದಲ್ಲಿ ಸಾರ್ವತ್ರಿಕ ಉಚಿತ ಕೋವಿಡ್ ಚಿಕಿತ್ಸೆ ನೀಡಬೇಕು, ಕೋವಿಡೇತರ ಆರೋಗ್ಯ ಸಮಸ್ಯೆಗಳಿಗೆ ಸೂಕ್ತ ಪರ್ಯಾಯ ಚಿಕಿತ್ಸೆ ವ್ಯವಸ್ಥೆ ಕಲ್ಪಿಸಬೇಕು , ಕೋವಿಡ್ ಚಿಕಿತ್ಸೆ ನಿರಾಕರಿಸುವ ಖಾಸಗಿ ಆಸ್ವತ್ರೆಗಳ ಮೇಲೆ ಡಿಎಂಎ ಅಡಿಯಲ್ಲಿ ಕ್ರಮ ಕೈಗೊಳ್ಳಬೇಕು. ಜೊತೆಗೆ 12 ವಿವಿಧ ಬೇಡಿಕೆಗಳ ಮನವಿಯನ್ನು ಉಪತಹಸೀಲ್ದಾರ್ ಕುಮಾರ್ ರವರಿಗೆ ಸಲ್ಲಿಸಲಾಯಿತು