ಶಿರಾ

ಬಿರುಗಾಳಿ ಸಹಿತ ಭಾರಿ ಮಳೆಗೆ ರೈತ ಸಾವು..

Published

on

ಶಿರಾ: ಶಿರಾ ತಾಲ್ಲೂಕಿನಾದ್ಯಂತ ಬಿರುಗಾಳಿ ಸಹಿತ ಭಾರೀ ಮಳೆ ಆಗುತ್ತಿದ್ದು, ಪರಿಣಾಮ ಶಿರಾ ತಾಲೂಕಿನ ಬುಕ್ಕಾ ಪಟ್ಟಣ ಹೋಬಳಿಯ ಜನಕಲ್ಲು ಗ್ರಾಮದಲ್ಲಿ ಸಿಡಿಲು ಬಡಿದು ರೈತ ಮೃತಪಟ್ಟಿರುವ ಘಟನೆ ನಡೆದಿದೆ. ಜಮೀನಿನಲ್ಲಿ ಕೆಲಸ ಮಾಡುವ ಸಮಯದಲ್ಲಿ ಮಳೆ ಬಂದ ಕಾರಣ ಮರದ ಆಶ್ರಯ ಪಡೆದಿದ್ದ ರೈತ 45 ವರ್ಷದ ಮಹಾಲಿಂಗಪ್ಪ ಸಿಡಿಲಿಗೆ ಬಲಿಯಾದ ದುರ್ದೈವಿ. ಸ್ಥಳಕ್ಕೆ ಶಿರಾ ನಗರ ಪೊಲೀಸರು ಆಗಮಿಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Click to comment

Trending

Exit mobile version