ರಾಯಚೂರು: ಸಿಂಧನೂರು ನಗರಸಭೆಯ ಸಿಬ್ಬಂದಿಗಳಿಗೆ ಕೊರೋನಾ ತಗುಲಿದ ಹಿನ್ನಲೆ ಕಛೇರಿಯನ್ನು ಮೂರು ದಿನಗಳ ಕಾಲ ಸೀಲ್ ಡೌನ್ ಮಾಡುವಂತೆ ರಾಯಚೂರು ಜಿಲ್ಲಾಧಿಕಾರಿ ಆರ್ ವೆಂಕಟೇಶ್ ಕುಮಾರ್ ಆದೇಶಿಸಿದ್ದಾರೆ. ರಾಯಚೂರು ಜಿಲ್ಲೆಯ ಸಿಂಧನೂರು ನಗರಸಭೆಯ ನಾಲ್ಕು ಸಿಬ್ಬಂದಿಗಳಿಗೆ ಕೊರೋನಾ ಪಾಸಿಟಿವ್ ಇರುವುದು ದೃಢವಾದ ಕಾರಣ ನಗರಸಭೆಯನ್ನು ಇಂದಿನಿಂದ ಮೂರು ದಿನಗಳಕಾಲ ಸೀಲ್ ಡೌನ್ ಮಾಡಲಾಗಿದ್ದು ನಂತರ ಎಂದಿನಂತೆ ಕಾರ್ಯ ನಿರ್ವಹಿಸಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ..