ತಿಪಟೂರು:ಸೇವೆಯಲ್ಲಿರುವ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಕೊಡುವುದರ ಜೊತೆಗೆ ಸರ್ಕಾರದ ಬೇರೆ ಯಾವುದೇ ಇಲಾಖೆಯಲ್ಲಿ ಇವರ ಸೇವೆಯನ್ನು ವೀಲೀನಗೊಳಿಸಬೇಕು ಹಾಗೂ ಈಗಾಗಲೇ ಸಹಾಯಕ ಪ್ರಾದ್ಯಾಪಕರ ನೇಮಕಾತಿಯನ್ನು ರದ್ದುಪಡಿಸಿರುವ ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಭದ್ರತೆ ನೀಡಬೇಕು, ಕೆಲವು ರಾಜ್ಯಗಳಲ್ಲಿ ಈಗಾಗಲೇ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆಯನ್ನು ನೀಡಿರುವಂತೆ ನಮಗೂ ನೀಡಬೇಕೆಂದು ತಿಪಟೂರು ಸರಕಾರಿ ಪದವಿ ಕಾಲೇಜಿನ ಅತಿಥಿ ಉಪನ್ಯಾಸಕರ ಸಂಘ ಸರ್ಕಾರವನ್ನು ಒತ್ತಾಯಿಸಿ ಪತ್ರದ ಮುಖಾಂತರ ವಿನೂತನವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ..
ಸಿದ್ದೇಶ್ವರ ಸಿ.ಎನ್ ಎಕ್ಸ್ ಪ್ರೆಸ್ ಟಿವಿ ತಿಪಟೂರು.