ಮಂಡ್ಯ

ಆಧುನಿಕ ಭಗೀರಥ ಕಾಮೇಗೌಡರ ಸ್ಥೀತಿ ಚಿಂತಾಜನಕ..!

Published

on

ಮಂಡ್ಯ: ಆಧುನಿಕ ಭಗೀರಥ ಕಾಮೇಗೌಡರಿಗೆ ಕೊರೊನಾ ಸೋಂಕು ದೃಡಪಟ್ಟ ಹಿನ್ನಲೆ ಕೆಲದಿನಗಳ ಹಿಂದೆ ಮಂಡ್ಯ ಜಿಲ್ಲೆಯ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ನನ್ನನ್ನು ನೋಡಿಕೊಳ್ಳಲು ಯಾರು ಇಲ್ಲ, ಮಲ ವಿಸರ್ಜನೆ ಮಾಡಲು ತೊಂದರೆಯಾಗುತ್ತದೆ ಎಂದು ಆಹಾರವನ್ನು ತ್ಯಜಿಸಿದ್ದಾರೆ.ಆಧ್ದರಿಂದ ಪರಿಸ್ಥೀತಿ ಮತ್ತಷ್ಟು ಗಂಭೀರವಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಮ್ಮ ಟ್ಟೀಟ್ಟರ್ ಖಾತೆಯಲ್ಲಿ ಕಾಮೇಗೌಡರ ಆರೋಗ್ಯದ ಸ್ಥೀತಿಯ ಬಗ್ಗೆ ಟ್ಟೀಟ್ ಮಾಡಿದ್ದು.ಕೆರೆ ಕಾಮೇಗೌಡರ ಆರೋಗ್ಯ ಸ್ಥಿತಿ ಗಭೀರವಾಗಿದೆ. ಅವರನ್ನು ಉಳಿಸಿಕೊಳ್ಳಬೇಕಾದ ಜವಾಬ್ದಾರಿ ನಮ್ಮ ಮೇಲಿದೆ ಆದ್ದರಿಂದ ರಾಜ್ಯ ಸರ್ಕಾರ ತುರ್ತು ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು, ಇನ್ನೂ ಮನ್ ಕೀ ಬಾತ್ ನಲ್ಲಿ ಕಾಮೇಗೌಡರನ್ನು ಪ್ರಧಾನಿಯವರು ಕೊಂಡಾಡಿದ್ದಾರೆ.ಮುಖ್ಯಮಂತ್ರಿ ಬಿಎಸ್ ವೈ ಕೂಡ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಕಾಮೇಗೌಡರನ್ನು ಹೊಗಳಿ ಕೊಂಡಾಡಿದರೆ ಸಾಲಾದು, ಅನಾರೋಗ್ಯದಿಂದ ಅವರು ಸೋತು ಸುಣ್ಣವಾಗಿರುವಾಗ ಒಳ್ಳೆಯ ಆಸ್ವತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಸರ್ಕಾರ ಮುಂದಾಗಬೇಕಿದೆ ಎಂದು ಟ್ವಿಟ್ಟರ್ ನಲ್ಲಿ ಟ್ಟೀಟ್ ಮೂಲಕ ಒತ್ತಾಯಿಸಿದ್ದಾರೆ.
ಎ.ಎನ್ ಲೋಕೇಶ್ ಎಕ್ಸ್ ಪ್ರೆಸ್ ಟಿವಿ ಮಳವಳ್ಳಿ

Click to comment

Trending

Exit mobile version