ಹಾಸನ

ರಾಜ್ಯದಲ್ಲಿ ಕಿಲ್ಲರ್ ಕೊರೊನಾ ಅಟ್ಟಹಾಸ…!

Published

on

ಹಾಸನ : ರಾಜ್ಯದಲ್ಲಿ ಕಿಲ್ಲರ್ ಕೊರೊನಾ ಅಟ್ಟಹಾಸ ಮೆರೆಯುತ್ತಿದ್ದು, ಹಾಸನದಲ್ಲಿ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗ್ತಾಯಿದೆ. ಇಂದು ಹಾಸನದಲ್ಲಿ ಕೊರೊನಾ ವಾರಿಯರ್ ಖಾಸಗಿ ಕ್ಲಿನಿಕ್ ನಡೆಸುತ್ತಿದ್ದ ಹೆಸರಾಂತ ಹಿರಿಯ ವೈದ್ಯ ರತ್ನಾಕರ್ ಶೆಟ್ಟಿ, ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಹಲವು ದಿನಗಳಿಂದ ಸೋಂಕಿನಿಂದ ಬಳಲುತ್ತಿದ್ದ ಅವರಿಗೆ ನಿಗಧಿತ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಕಳೆದ ರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಸೋಂಕಿನಿಂದ ಮೃತಪಟ್ಟ ಹಿನ್ನಲೆ ಮಾರ್ಗಸೂಚಿಯಂತೆ ಅಂತ್ಯಸಂಸ್ಕಾರ ನಡೆಸಲು ಜಿಲ್ಲಾಡಳಿತ ಸಿದ್ಧತೆ ನಡೆಸಿಕೊಂಡಿದೆ.

ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು.

Click to comment

Trending

Exit mobile version