ವಿಶಾಖಪಟ್ಟಣ: ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ಒಂದಲ್ಲಾ ಒಂದು ದುರಂತ ಸಂಭವಿಸುತ್ತಲ್ಲೇ ಇದೆ. ಕಳೆದ 2 ತಿಂಗಳಲ್ಲಿ ಗ್ಯಾಸ್ ಲೀಕ್ ಆಗಿ ಹಲವು ಮಂದಿ ಪ್ರಾಣ ಕಳೆದುಕೊಂಡಿದ್ದರು. ಇದೀಗ ಕ್ರೇನ್ ಬಿದ್ದು 10 ಮಂದಿ ಸಾವನ್ನಪ್ಪಿದ್ದಾರೆ. ನೋಡ ನೋಡುತ್ತಿದ್ದಂತೆ ಹಿಂದೂಸ್ತಾನ್ ಶಿಫ್ಯಾರ್ಡ್ನಲ್ಲಿದ್ದ ಕ್ರೇನ್ ಕುಸಿದಿದೆ. ಕ್ರೇನ್ ಅಡಿ ಸಿಲುಕಿ 10 ಜನ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಸದ್ಯ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ಕ್ರೇನ್ ಬೀಳಲು ಕಾರಣ ಏನೆಂಬುದರ ಬಗ್ಗೆ ತನಿಖೆ ನಡೆಯುತ್ತಿದೆ.
ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು.