ಮಳವಳ್ಳಿ: ಬೈಕ್ ಮತ್ತು ಗೂಡ್ಸ್ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಳವಳ್ಳಿ ಪಟ್ಟಣದ ಸಂತೆಮೈದಾನದ ಬಳಿ ನಡೆದಿದೆ. ಮಳವಳ್ಳಿ ತಾಲ್ಲೂಕಿನ ನೆಲ್ಲೂರು ಗ್ರಾಮದ 39 ವರ್ಷದ ನಾಗರಾಜು ಮೃತಪಟ್ಟ ದುರ್ದೈವಿ. ಮದ್ದೂರು ಕಡೆಯಿಂದ ಮಳವಳ್ಳಿ ಮಾರ್ಗವಾಗಿ ಟಿ. ನರಸೀಪುರಕ್ಕೆ ಹೋಗುತ್ತಿದ್ದ ಗೂಡ್ಸ್ ಲಾರಿ ಸಂತೆಯಿಂದ ಮರಳಿ ಗ್ರಾಮಕ್ಕೆ ತೆರಳುತ್ತಿದ್ದ ನಾಗಾರಾಜು ಬೈಕ್ ಗೆ ಡಿಕ್ಕಿ ಹೊಡೆದಿದ್ದು ನಾಗಾರಾಜು ಹಿಂಬದಿ ಚಕ್ರಕ್ಕೆ ಸಿಲುಕಿದ್ದು ತಲೆಯೂ ಸಂಪೂರ್ಣ ಜಜ್ಜಿಹೋಗಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಡಿವೈ ಎಸ್ ಪಿ ಪೃಥ್ವಿ ಟೌನ್, ಇನ್ಸ್ ಪೆಕ್ಟರ್ ರಾಜೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೈಕ್ ಗೆ ಡಿಕ್ಕಿ ಹೊಡೆದು ಲಾರಿಯನ್ನು ನಿಲ್ಲಿಸದೆ ಹೋಗುತ್ತಿದ್ದ ಲಾರಿ ಚಾಲಾಕನನ್ನು ಸಾರ್ವಜನಿಕರು ಮಹಾಲಕ್ಷ್ಮಿ ಚಿತ್ರಮಂದಿರ ಬಳಿ ಲಾರಿ ಸಮೇತ ಹಿಡಿದು ಗೂಸ ಕೊಟ್ಟು ಪೊಲೀಸರಿಗೆ ಒಪ್ಪಿಸಿದ್ದಾರೆ. ಇನ್ನು ಸ್ಥಳಕ್ಕೆ ಮಳವಳ್ಳಿ ಪಟ್ಟಣದ ಪೊಲೀಸರು ಭೇಟಿ ನೀಡಿದ್ದು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ವರದಿ-ಎ ಎನ್ ಲೋಕೇಶ್ ಎಕ್ಸ್ ಪ್ರೆಸ್ ಟಿವಿ ಮಳವಳ್ಳಿ..