ಚಿತ್ರದುರ್ಗ : ಸರಿಯಾದ ಸಮಯದಲ್ಲಿ ಆಂಬ್ಯುಲೆನ್ಸ್ ಸಿಗದ ಕಾರಣ ಕೊರೊನಾಗೆ ಮುಖ್ಯ ಶಿಕ್ಣಕ ಬಲಿಯಾದ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ಮೊಳಕಾಲ್ಮೂರು ಪಟ್ಟಣದ 60 ವರ್ಷದ ಶಿಕ್ಷಕ ತೀರ್ವ ಉಸಿರಾಟ ಸಮಸ್ಯೆಯಿಂದ ಬಳಲಿ ಸಾವನ್ನಪ್ಪಿದ್ದಾರೆ. ಮುಖ್ಯ ಶಿಕ್ಷಕರಿಗೆ ನಿನ್ನೆ ಬೆಳಗ್ಗೆ ಕೊರೊನಾ ಸೋಂಕು ಇರುವುದು ಧೃಡವಾಗಿತ್ತು, ಆದರೆ ಮಧ್ಯಾಹ್ನ 2 ಗಂಟೆಯಾದರು ಆಂಬ್ಯುಲೆನ್ಸ್ ಬಂದಿರಲಿಲ್ಲ.ಸ್ಥಳಕ್ಕೆ ಆಂಬ್ಯುಲೆನ್ಸ್ ಬಂದ ಬಳಿಕವೂ ಗಂಟೆಗೂ ಹೆಚ್ಚು ಕಾಲ ವಿಳಂಬ ಮಾಡಿದ್ದರಿಂದ ವ್ಯಕ್ತಿ ಸಾವನ್ನಪ್ಪಿದ್ದಾರೆಂದು ವೈದ್ಯರು ಹಾಗೂ ಚಾಲಕನ ವಿರುದ್ದ ಮೃತ ವ್ಯಕ್ತಿಯ ಸಂಬಂಧಿಕರು ಆರೋಪಿಸಿದ್ದಾರೆ. ಮೃತ ಶಿಕ್ಷಕ ತೀವ್ರ ಜ್ವರ, ಕೆಮ್ಮು ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದು, ಕೊನೆಗೆ ಆಂಬ್ಯುಲೆನ್ಸ್ನಲ್ಲೇ ನರಳಿ ನರಳಿ ಜೀವ ಬಿಟ್ಟಿದ್ದರಿಂದ ಸಾರ್ವಜನಿಕರು ಆರೋಗ್ಯ ಇಲಾಖೆಯ ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ವರದಿ-ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು