ಕೋಲಾರ:ಕೋಲಾರದಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಕೋವಿಡ್-19 ಕಾರಣದಿಂದ ಸರಳವಾಗಿ ಆಚರಿಸಲಾಯಿತು.
ನಗರದ ಸರ್ ಎಂ.ವಿ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಧ್ವಜಾರೋಹಣ ನೆರವೇರಿಸಿದರು,
ಪೋಲಿಸ್ ಇಲಾಖೆಯಿಂದ ಗೌರವ ವಂದನ ಸ್ವೀಕರಿಸಿದ ಸಚಿವರು, ತೆರೆದ ವಾಹನದಲ್ಲಿ ಪೋಲಿಸ್ ಇಲಾಖೆಯ ಕವಾಯತು ಪರಿವೀಕ್ಷಣೆ ನಡೆಸಿದರು. ಇನ್ನೂ
ಕೊರೋನಾ ಹಿನ್ನೆಲೆ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳ ಹಾಗೂ ಆಧಿಕಾರಿಗಳು ಮಾತ್ರ ಭಾಗಿಯಾಗಿದ್ರು.
ಸಮಾಜಿಕ ಅಂತರ ನಿಯಮವಳಿ ಪ್ರಕಾರ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಕರೋನಾ ದಿಂದಾಗಿ ಈ ಬಾರಿ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮಗಳ ಹಾಗೂ ಸಾರ್ವಜನಿಕರಿಗೆ ಅವಕಾಶವಿರಲಿಲ್ಲ. ಕಾರ್ಯಕ್ರಮದಲ್ಲಿ ಸಂಸದ ಎಸ್ ಮುನಿಸ್ವಾಮಿ , ಶಾಸಕ ಕೆ. ಶ್ರೀನಿವಾಸ್ ಗೌಡ, ಜಿಲ್ಲಾ ಪಂಚಾಯತ ಆಧ್ಯಕ್ಷ ಸಿಎಸ್ ವೆಂಕಟೇಶ್, ಜಿಲ್ಲಾಧಿಕಾರಿ ಸಿ.ಸತ್ಯಭಾಮ, ಎಸ್ಪಿ ಕಾರ್ತಿಕ್ ರೆಡ್ಡಿ ಸೇರಿದಂತೆ ಜಿಲ್ಲಾ ಮಟ್ಟದ ಆಧಿಕಾರಿಗಳು ಭಾಗಿಯಾಗಿದ್ರು.
ವರದಿ-ಬೆಟ್ಟಪ್ಪ ಎಕ್ಸ್ ಪ್ರೆಸ್ ಟಿವಿ ಕೋಲಾರ