ಮಳ್ಳವಳ್ಳಿ ಪಟ್ಟಣದ ಭಕ್ತ ಕನಕದಾಸ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ಥಳೀಯ ತಹಶಿಲ್ದಾರ್ ಚಂದ್ರಮೌಳಿ ದ್ವಜಾರೋಹಣ ನೆರವೇರಿಸಿದರು. ಕೊರೊನಾ ಸೋಂಕು ಹರಡುವ ಕಾರಣ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಸಾರ್ವಜನಿಕರು ಭಾಗಿಯಾಗಲು ಅವಕಾಶ ಇರಲಿಲ್ಲ, ಹೀಗಾಗಿ ಸ್ಥಳೀಯ ಶಾಸಕ ಡಾ.ಕೆ ಅನ್ನದಾನಿ, ತಾಲೂಕು ಪಂಚಾಯತ್ ಅಧ್ಯಕ್ಷ ಸುಂದರೇಶ್ ಸೇರಿದಂತೆ ಹಲವು ಜನ ಪ್ರತಿನಿಧಿಗಳು ಹಾಗು ಅಧಿಕಾರಿಗಳು ಮಾತ್ರ ಭಾಗವಹಿಸಿದ್ದರು. ಇದೇ ವೇಳೆ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೂರನೇ ಸ್ಥಾನ ಪಡೆದ ಅಮೂಲ್ಯ ಹಾಗು ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.
ವರದಿ : ಎ.ಎನ್ ಲೋಕೇಶ್
ಎಕ್ಸ್ಪ್ರೆಸ್ ಟಿವಿ
ಮಳವಳ್ಳಿ