ಬಾಗಲಕೋಟೆಯ ಜಿಲ್ಲಾಡಳಿತದಿಂದ ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳನೆರವೇರಿಸಿದರು.
ಬಳಿಕ ಪೊಲೀಸ್ ಇಲಾಖೆ ಹಾಗೂ ಗೃಹ ರಕ್ಷಕ ದಳದ ಪರೇಡ ವೀಕ್ಷಣೆ ಮಾಡಿದ್ದು, ಆಕರ್ಷಕ ಪಥಸಂಚಲನ ಕೂಡ ನಡೆಯಿತು.
ಈ ಭಾರಿ ಕೊರೋನಾ ಹಿನ್ನಲೆಯಲ್ಲಿ ಶಾಲಾ ವಿದ್ಯಾರ್ಥಿಗಳು ಹಾಗೂ ಎನ್ ಸಿಸಿ ಕ್ಯಾಡೆಟ್ , ಸ್ಕೌಟ್ಸ್ ಗೈಡ್ಸ ಅವರ ಪರೇಡ ಇರಲಿಲ್ಲ.
ಸ್ವಾತಂತ್ರ್ಯ ದಿನಾಚರಣೆ ಉದ್ದೇಶಿಸಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮಾತನಾಡಿದರು.ಸ್ವಾತಂತ್ರ್ಯ ಹೋರಾಟಕ್ಕೆ ಕನ್ನಡಿಗರ ಕೊಡುಗೆ ಅಪಾರವಾಗಿದೆ ಎಂದರು.
ಕೊರೋನಾ ಸೋಂಕು ನಿಯಂತ್ರಣಕ್ಕೆ ಸೇವೆ ಸಲ್ಲಿಸಿದ ಕೋವಿಡ್-೧೯ ವಾರಿಯರ್ಸ್ ಗಳನ್ನು ಜಿಲ್ಲಾಡಳಿತದಿಂದ ಸನ್ಮಾನಿಸಲಾಯಿತು.
ಸಂಸದ ಪಿ.ಸಿ.ಗದ್ದಿಗೌಡರ,ಶಾಸಕ ವೀರಣ್ಣ ಚರಂತಿಮಠ, ಜಿ.ಪಂ.ಅಧ್ಯಕ್ಷೆ ಬಾಯಕ್ಕ ಮೇಟಿ, ನಗರಸಭೆ ಸದಸ್ಯ ರವಿ ಧಾಮಜಿ, ತಾ.ಪಂ ಅಧ್ಯಕ್ಷೆ ಚನ್ನನಗೌಡ ಪರನಗೌಡರ,ವಿ.ಪ.ಮಾಜಿ ಸದಸ್ಯ ನಾರಾಯಣಸಾ ಭಾಂಡಗೆ , ಜಿಲ್ಲಾಧಿಕಾರಿ ಕ್ಯಾ.ರಾಜೇಂದ್ರ,ಎಸ್ಪಿ ಲೋಕೇಶ ಜಗಲಾಸಾರ, ಸಿಇಓ ಭೂಬಾಲನ್ ಇದ್ದರು.