ಮೈಸೂರು

ಗೌರಿ ಗಣೇಶ ಹಬ್ಬ ಹಿನ್ನೆಲೆ 4 ದಿನ ಮೈಸೂರಿನ ಹೂವಿನ ಮಾರುಕಟ್ಟೆ ಸ್ಥಳಾಂತರ..!

Published

on

ಮೈಸೂರು : ಕೊರೊನಾ ಸೋಂಕು ಹರಡುವ ಭೀತಿ ಹಿನ್ನೆಲೆ ನಾಳೆಯಿಂದ ನಾಲ್ಕು ದಿನಗಳ ಕಾಲ ದೇವರಾಜ ಹೂವಿನ ಮಾರುಕಟ್ಟೆ ಸ್ಥಳಾಂತರ ಮಾಡಲು ಮೈಸೂರು ಪಾಲಿಕೆ ಆಯುಕ್ತ ಗುರುದತ್ತ ಹೆಗ್ಡೆ ಆದೇಶಿಸಿದ್ದಾರೆ.
ಗೌರಿ ಗಣೇಶ ಹಬ್ಬ ಹಿನ್ನೆಲೆ ದೇವರಾಜ ಹೂವಿನ ಮಾರುಕಟ್ಟೆಯನ್ನ ಮೈಸೂರು ರೈಲ್ವೆ ನಿಲ್ದಾಣ ಬಳಿ ಇರುವ ಜೆ.ಕೆ ಮಾರುಕಟ್ಟೆಗೆ ಸ್ಥಳಾಂತರ ಮಾಡಲಾಗಿದೆ. ಮಾರುಕಟ್ಟೆ ಬಳಿ ಸಾಕಷ್ಟು ಜನ ಸೇರುವುದರಿಂದ ಸೋಂಕು ಹರಡದಂತೆ ತಡೆಯಲು ಈ ನಿರ್ಧಾರ ಮಾಡಲಾಗಿದೆ ಎನ್ನಲಾಗಿದೆ.

ವರದಿ-ಸುಪ್ರಿಯಾ ಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Click to comment

Trending

Exit mobile version