ತಿಪಟೂರು: ಬೆಂಗಳೂರಿನ ಡಿಜೆ ಹಳ್ಳಿ ಗಲಭೆ ಈ ಘಟನೆಯನ್ನು ಪತ್ರಕರ್ತರು ಹಾಗೂ ಕ್ಯಾಮೆರಾ ಮ್ಯಾನ್ ಗಳ ಮೇಲೆ ಹಲ್ಲೆ ಮಾಡಿರುವುದನ್ನು ಖಂಡಿಸಿ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಇಂತಹ ಘಟನೆಗಳು ನಡೆಯದಂತೆ ಕ್ರಮ ವಹಿಸಬೇಕೆಂದು ಒತ್ತಾಯಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತಿಪಟೂರು ಶಾಖೆ ವತಿಯಿಂದ ತಹಸೀಲ್ದಾರ ಚಂದ್ರಶೇಖರ್ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ಪತ್ರಕರ್ತರ ಮೇಲೆ ನಡೆಯುವ ಹಲ್ಲೆ ದಾಂಧಲೆಯಂತಹ ದುಷ್ಕೃತ್ಯಗಳಿಗೆ ಸರ್ಕಾರ ಕಡಿವಾಣ ಹಾಕಬೇಕಿದೆ. ಇಂತಹ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುವ ಜೊತೆಗೆ ಪತ್ರಕರ್ತರಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಸರ್ಕಾರವನ್ನು ಸಂಘದ ಅಧ್ಯಕ್ಷರು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ತಿಪಟೂರು ತಾಲ್ಲೂಕು ಸಂಘದ ಅಧ್ಯಕ್ಷರಾದ ಬಿ ರಂಗಸ್ವಾಮಿ, ಕಾರ್ಯದರ್ಶಿಗಳಾದ ಮಂಜುನಾಥ್ ಮತ್ತು ಸಂಘದ ಎಲ್ಲ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ವರದಿ- ಸಿದ್ದೇಶ್ವರ ಸಿಎನ್. ಎಕ್ಸ್ ಪ್ರೆಸ್ ಟಿವಿ ತಿಪಟೂರು