ಬೆಂಗಳೂರು

ಸಿಇಟಿ ಫಲಿತಾಂಶ ಮುಂದೂಡಿಕೆ…ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಸ್ಪಷ್ಟನೆ…!

Published

on

ಬೆಂಗಳೂರು : ನಾಳೆ ಪ್ರಕಟವಾಗಬೇಕಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ ಫಲಿತಾಂಶ ತಾಂತ್ರಿಕ‌ ಕಾರಣದಿಂದ ಮುಂದೂಡಿಕೆ ಮಾಡಲಾಗಿದೆ. ಆಗಸ್ಟ್ 20 ರಂದು ಪ್ರಕಟಿಸುವುದಾಗಿ ಘೋಷಣೆ ಮಾಡಿದ್ದ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ, ಇದೀಗ ನಾಳೆ ಬದಲು ಶುಕ್ರವಾರ ಘೋಷಣೆ ಮಾಡುವುದಾಗಿ ತಿಳಿಸಿದ್ದಾರೆ.ಆಗಸ್ಟ್ 21 ಮಧ್ಯಾಹ್ನ 12.30 ಕ್ಕೆ http://karresults.nic.in ನಲ್ಲಿ ಸಿಇಟಿ ಫಲಿತಾಂಶ ಪ್ರಕಟವಾಗಲಿದೆ.ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಈ ವರ್ಷ ಅಕ್ಟೋಬರ್ ಒಳಗೆ ಆನ್‌ಲೈನ್‌ ಕೌನ್ಸೆಲಿಂಗ್‌ ಮಾಡಲಾಗುತ್ತದೆ. ವಿದ್ಯಾರ್ಥಿಗಳು ತಾವು ಇದ್ದ ಜಾಗದಿಂದಲೇ ಕೌನ್ಸೆಲಿಂಗ್‌ ಎದುರಿಸಬಹುದಾಗಿದೆ

ವರದಿ-ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Click to comment

Trending

Exit mobile version