ಮಂಡ್ಯ

ಬಿಜೆಪಿ ಸರ್ಕಾರದ ಭ್ರಷ್ಟಾಚಾರ ವಿರೋದಿಸಿ ಕಾಂಗ್ರೇಸ್ ಪಕ್ಷದಿಂದ‌ ಪ್ರತಿಭಟನೆ…!

Published

on

ಮಳವಳ್ಳಿ: ರಾಜ್ಯ ವ್ಯಾಪ್ತಿ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಡಿಕೆಶಿ ರವರು ಪ್ರತಿಭಟನೆಗೆ ಕರೆ ನೀಡಿದ್ದ ಹಿನ್ನಲೆಯಲ್ಲಿ
ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಭೂಸ್ವಾಧೀನ ಕಾಯ್ದೆ ,ಕಾರ್ಮಿಕ ಕಾಯ್ದೆ ನೀತಿ ,ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ, ಮಳವಳ್ಳಿ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಳವಳ್ಳಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ಮಳವಳ್ಳಿ ಪಟ್ಟಣದ ಕಾಂಗ್ರೆಸ್ ಪಕ್ಷದ ಕಚೇರಿಯ ಕಾಂಗ್ರೆಸ್ ಪಕ್ಷ ಅಧ್ಯಕ್ಷರುಗಳಾದ ದೇಜರಾಜು , ಸುಂದರ್ ರಾಜ್ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ವಿರುದ್ದ ಘೋಷಣೆ ಕೂಗುತ್ತಾ ಪಟ್ಟಣದ ಪ್ರಮುಖ ಬೀದಿಗಳ ಮೂಲಕ ತಾಲ್ಲೂಕು ಕಚೇರಿಗೆ ತೆರಳಿ ಪ್ರತಿಭಟನೆ ನಡೆಸಿದರು. ಶಿರಸ್ತೇದಾರ್ ವಸಂತಕುಮಾರ್ ರವರಿಗೆ ಪ್ರತಿಭಟನಾಕಾರರು ಮನವಿಸಲ್ಲಿಸಿದ್ದು, ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜು ಅರಸುರವರ ಜನ್ಮದಿನವನ್ನು ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಅಚರಿಸಲಾಯಿತು. ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಕೆ .ಜೆ .ದೇವರಾಜು ಎಸ್ .ಪಿ .ಸುಂದರ್ ರಾಜ್ , ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಮೂರ್ತಿ, ಕಾರ್ಮಿಕ ವಿಭಾಗದ ತಾಲ್ಲೂಕು ಅಧ್ಯಕ್ಷ ಹುಸ್ಕೂರುಚಿಕ್ಕಸ್ವಾಮಿ, ತಾ.ಪಂ.ಅಧ್ಯಕ್ಷ ಸುಂದರೇಶ್ ,ಉಪಾಧ್ಯಕ್ಷ ಮಾಧು, ಕಾಂಗ್ರೆಸ್ಸ್ ಮುಖಂಡ ಶ್ರೀನಿವಾಸ್ ನರೀಪುರ, ಸೇರಿದಂತೆ ಮತ್ತಿತ್ತರರು ಇದ್ದರು

ವರದಿ: ಎ.ಎನ್ ಲೋಕೇಶ್
ಎಕ್ಸ್‌ಪ್ರೆಸ್‌ ಟಿವಿ
ಮಳವಳ್ಳಿ

Click to comment

Trending

Exit mobile version