ಲಕ್ಷಾಂತರ ಕಾರ್ಮಿಕರ ನೆರವಿಗೆ ನಿಂತ ನಟ ಸೋನು ಸೂದ್ ರಿಯಲ್ ಲೈಫ್ ಹೀರೋ ಆಗಿದ್ದಾರೆ. ಲಾಕ್ ಡೌನ್ ಬಳಿಕವೂ ಜನಪರ ಕೆಲಸ ಮುಂದುವರೆಸಿರುವ ಸೋನು ಸೂದ್ ಸಾವಿರಾರು ಮಂದಿಯ ಕಷ್ಟಕ್ಕೆ ನೆರವಾಗುತ್ತಿದ್ದಾರೆ.ಜನರ ಕಷ್ಟಕ್ಕೆಂದು ಸದಾ ಹೆಗಲು ಕೊಡುತ್ತಿದ್ದ ನಟ ಸೋನು ಸೂದ್ ಈಗಾ ಸಹಾಯ ವಾಣಿಯನ್ನು ಪ್ರಾರಂಭಿಸಿದ್ದಾರೆ. ಈ ಮೂಲಕ ಬಡವರಿಗೆ, ಕಷ್ಟದಲ್ಲಿರೋರಿಗೆ ಸಹಾಯ ಮಾಡುತ್ತಿದ್ದಾರೆ. ಜೊತೆಗೆ ನಮ್ಮ ದೇಶದ ಹೆಣ್ಣು ಮಕ್ಕಳಿಗೆ ಸ್ವಯಂ ರಕ್ಷಣೆ ಮಾಡಿಕೊಳ್ಳಲು ತರಭೇತಿ ನೀಡಬೇಕು. ನಾನು ಒಂದು ಸಣ್ಣ ತರಭೇತಿ ಕೇಂದ್ರವನ್ನು ತೆರೆಯಬೇಕು. ನಮ್ಮ ದೇಶದ ಹೆಣ್ಣು ಮಕ್ಕಳಿಗೆ ಸ್ವಯಂ ರಕ್ಷಣೆ ತಂತ್ರಗಳನ್ನು ಹೇಳಿಕೊಡಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು. ಇದೀಗ ಮಾತಿನಂತೆ ಗಣಪತಿ ಹಬ್ಬದ ದಿನದಂದು ಮಾರ್ಷಲ್ ಆರ್ಟ್ಸ್ ತರಭೇತಿ ಶಾಲೆಯನ್ನು ತೆರಿದಿದ್ದು ಜನರ ಕಷ್ಟಕ್ಕೆ ಸ್ವಂಧಿಸಿದ ಮಾದರಿ ನಾಯಕರಾಗಿದ್ದಾರೆ.
ವರದಿ-ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು