ಆನೇಕಲ್ : ಗಣೇಶ ಮೂರ್ತಿ ವಿಸರ್ಜನೆಗೆ ಹೋದ ಇಬ್ಬರು ಬಾಲಕರು ನೀರು ಪಾಲಾಗಿರುವ ಘಟನೆ ತಮಿಳುನಾಡಿನ ಸೂಳಗಿರಿ ಸಮೀಪದ ಅನಾಸಂದ್ರಂ ಕೆರೆಯಲ್ಲಿ ನಡೆದಿದೆ. ಸೂಳಗಿರಿ ವಾಸಿಗಳಾದ 12 ವರ್ಷದ ಭೂಪತಿ ಮತ್ತು ಮುರಳಿ ಗಣೇಶ ಚತುರ್ಥಿ ಅಂಗವಾಗಿ ಮನೆಯಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡಿದ್ದರು, ಮೂರು ದಿನದ ಬಳಿಕ ಇಂದು ಸ್ನೇಹಿತರೊಂದಿಗೆ ಕೆರೆಯಲ್ಲಿ ಗಣೇಶ ವಿಸರ್ಜನೆ ಹೋಗಿದ್ದರು. ನೀರಿನ ಆಳ ಅರಿಯದೇ ಗಣೇಶ ವಿಸರ್ಜನೆಗೆ ಇಳಿದಿದ್ದ ಬಾಲಕರು ನೋಡ ನೋಡುತ್ತಿದ್ದಂತೆ ಗಣೇಶ ಮೂರ್ತಿ ಜೊತೆ ಇಬ್ಬರು ನೀರುಪಾಲಾಗಿದ್ದಾರೆ. ಇನ್ನೂ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸೂಳಗಿರಿ ಪೊಲೀಸರು ಭೇಟಿ ಸ್ಥಳೀಯರ ನೆರವಿನಿಂದ ಮೃತ ದೇಹಗಳನ್ನು ಹೊರತೆಗೆದಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವರದಿ-ಕಾರ್ತಿಕ್ ಎಕ್ಸ್ ಪ್ರೆಸ್ ಟಿವಿ ಆನೇಕಲ್.