ಹುಬ್ಬಳ್ಳಿ-ಧಾರವಾಡ

ಮುರುಗೇಶ ನಿರಾಣಿ ವಿರುದ್ಧ ಕಾನೂನು ಕ್ರಮಕ್ಕೆ ಕರ್ನಾಟಕ ಕ್ಷತ್ರೀಯ ಒಕ್ಕೂಟ ಆಗ್ರಹ..!

Published

on

ಹುಬ್ಬಳ್ಳಿ:ಬಿಜೆಪಿ ಶಾಸಕ ಮುರುಗೇಶ ನಿರಾಣಿ ಅವರ ಮೀಡಿಯಾ ಗ್ರೂಪ್ ಸಾಮಾಜಿಕ ಜಾಲತಾಣದಲ್ಲಿ ಹಿಂದು ದೇವತೆಗಳ ಬಗ್ಗೆ ಅವಹೇಳನಕಾರಿ ಪೊಸ್ಟ್ ಮಾಡಿ ಸಾಮಾಜಿಕ ಸ್ವಾಸ್ಥ್ಯ ಹಾಳು‌ಮಾಡುವ ಕಾರ್ಯ ಮಾಡಿದ್ದು, ಕೂಡಲೇ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುಬೇಕೆಂದು ಕರ್ನಾಟಕ ಕ್ಷತ್ರಿಯ ಒಕ್ಕೂಟದ ಕಾರ್ಯಕರ್ತರು ಪ್ರತಿಭಟನೆ ಮಾಡಿದರು.ಶಾಸಕ ಮುರಗೇಶ ನಿರಾಣಿ ಭಾವ ಚಿತ್ರವನ್ನು ಸುಟ್ಟು ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಶಾಸಕ ಮೀಡಿಯಾ ಗ್ರೂಪ್ ನಲ್ಲಿ ಇತ್ತೀಚೆಗೆ ಹಿಂದೂಗಳ ಪವಿತ್ರ ದೇವತೆಗಳ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿ ಹಿಂದೂ ಸಮಾಜದ ಸಮಾಜಿಕ ಸ್ವಾಸ್ಥ್ಯ ಹಾಳು ಮಾಡುವ ಕೆಲಸ ಮಾಡಿದ್ದು ಖಂಡನೀಯ, ರಾಜ್ಯ ಸರ್ಕಾರ, ಗೃಹ ಇಲಾಖೆಗೆ ಈಗಾಗಲೇ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು ಸಹ ಯಾವುದೇ ಪ್ರಯೋಜನವಾಗಿಲ್ಲ ಮತ್ತು ಅವರ ಮೇಲೆ ಕ್ರಮ ತೆಗೆದುಕೊಂಡಿಲ್ಲ. ಈ ಹಿನ್ನೆಲೆಯಲ್ಲಿ ಕರ್ನಾಟಕ ಕ್ಷತ್ರೀಯ ಒಕ್ಕೂಟದ ರಾಜ್ಯ ಅಧ್ಯಕ್ಷರ ಆದೇಶದ ಮೇರೆಗೆ ರಾಜ್ಯದಾದ್ಯಂತ ಹೋರಾಟ ಮಾಡಲಾಗುತ್ತಿದೆ. ಕೂಡಲೇ ರಾಜ್ಯ ಸರ್ಕಾರ ಶಾಸಕ ಮುರಗೇಶ ನೀರಾಣಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳದಿದ್ದರೇ ಮುಂದಿನ ದಿನಗಳಲ್ಲಿ ಸತ್ಯಗ್ರಹ ಹಾಗೂ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

ವರದಿ- ರಾಜು ಮುದುಗಲ್ ಎಕ್ಸ್ ಪ್ರೆಸ್ ಟಿವಿ

Click to comment

Trending

Exit mobile version