ಬೆಂಗಳೂರು: ಕೊರೊನಾ ವೈರಸ್ ಹಿನ್ನೆಲೆ ಹಾಗೂ ಲಾಕ್ಡೌನ್ನಿಂದಾಗಿ ಬೆಂಗಳೂರು ಮೆಟ್ರೊ ಸೇವೆ ನಿಂತು 5 ತಿಂಗಳುಗಳಿಗೂ ಹೆಚ್ಚು ಕಾಲವಾಗಿದೆ. ಇದೀಗ ಮೆಟ್ರೊ ಪ್ರಯಾಣಿಕರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಹಿಸುದ್ದಿ ಕೊಟ್ಟಿದ್ದಾರೆ. ಆನಂದ್ ರಾವ್ ವೃತ್ತದಲ್ಲಿರುವ ಮೇಲ್ಸೆತುವೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೇಲ್ಸೆತುವೆ ಎಂದು ನಾಮಕರಣ ಮಾಡಿದ ಬಳಿಕ ಮಾತನಾಡಿದ ಸಿಎಂ ಯಡಿಯೂರಪ್ಪ ಶೀಘ್ರದಲ್ಲಿಯೇ ಬೆಂಗಳೂರು ಮೆಟ್ರೊ ಸೇವೆಯನ್ನು ಪುನರ್ ಆರಂಭಿಸಲಾಗುವುದು, ಕೋವಿಡ್-19 ಹಿನ್ನೆಲೆಯಲ್ಲಿ ಎಲ್ಲಾ ಮುಂಜಾಗೃತಾ ಕ್ರಮಗಳನ್ನು ಕೈಗೊಂಡು ಮೆಟ್ರೊ ಸೇವೆ ಪುನರ್ ಆರಂಭಿಸಲಾಗುವುದು ಎಂದಿದ್ದಾರೆ.
ವರದಿ- ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು.