Uncategorized

ದಕ್ಷಿಣ ಕನ್ನಡ ಜಿಲ್ಲೆಯ ಸಂಚಾರಕ್ಕೆ ಸರ್ಕಾರದಿಂದ ಅನುಮತಿ..!

Published

on

ಕೇರಳ-ಕರ್ನಾಟಕ ಸಂಪರ್ಕಿಸುವ ಪ್ರಮುಖ ನಾಲ್ಕು ರಸ್ತೆಗಳ ಗಡಿಗಳನ್ನು ತೆರವುಗೊಳಿಸಬೇಕು ಎಂದು ಕೇರಳ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ. ಕೇಂದ್ರ ಸರ್ಕಾರ ಅಂತರರಾಜ್ಯ ರಸ್ತೆಗಳ ಬಂದ್ ತೆರವುಗೊಳಿಸುವಂತೆ ಆದೇಶ ನೀಡಿತ್ತು.ಆದರೆ ಕೇರಳ ಸರ್ಕಾರ ಕೇರಳ-ಕರ್ನಾಟಕ ಗಡಿ ಬಂದ್ ಅನ್ನು ತೆರವು ಮಾಡಿರಲಿಲ್ಲ. ಕಾಸರಗೋಡು ಬಿಜೆಪಿ ಅಧ್ಯಕ್ಷ, ವಕೀಲ ಕೆ. ಶ್ರೀಕಾಂತ್ ಈ ಕುರಿತು ಕೇರಳ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಗಡಿಗಳನ್ನು ತೆರವುಗೊಳಿಸಬೇಕು ಎಂದು ಹೇಳಿದೆ.ಕಾಸರಗೋಡು-ದಕ್ಷಿಣ ಕನ್ನಡ ಸಂಪರ್ಕಿಸುವ ಜಾಲ್ಸೂರು, ಪಾಣತ್ತೂರು, ಪೆರ್ಲ ಗಡಿಗಳಲ್ಲಿ ಹಾಕಿರುವ ಬಂದ್ ತೆರವುಗೊಳಿಸಬೇಕು ಎಂದು ಹೈಕೋರ್ಟ್ ಆದೇಶದಲ್ಲಿ ತಿಳಿಸಿದೆ.ಇದರಿಂದಾಗಿ ಅಂತರರಾಜ್ಯ ಸಂಚಾರಕ್ಕೆ ಇದ್ದ ತೊಡಕು ನಿವಾರಣೆಯಾಗಿದೆ.

ವರದಿ-ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು..

Click to comment

Trending

Exit mobile version