ಬಂಗಾರಪೇಟೆ: ಕುಡಿದ ಅಮಲಿನಲ್ಲಿ ಹೆಂಡತಿಯನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಐನೋರಹಳ್ಳಿ ಎಂಬಾ ಗ್ರಾಮದಲ್ಲಿ ನಡೆದಿದೆ. 35 ವರ್ಷದ ಮಂಜುನಾಥ್ ಎಂಬಾತ 28 ವರ್ಷದ ರತ್ನಮ್ಮ ಹೆಸರಿನ ಪತ್ನಿಯನ್ನು ಕುಡಿದ ಅಮಲಿನಲ್ಲಿ ಮನಸ್ಸೋ ಇಚ್ಛೇ ತಳಿಸಿ ಎದೆ,ಮೈ,ಕುತ್ತಿಗೆಗೆ ಕಚ್ಚಿ ಭೀಕರವಾಗಿ ಥಳಿಸಿ ಪರಾರಿಯಾಗಿದ್ದಾ. ಮನೆಯವರು ರತ್ನಮ್ಮನನ್ನು ಬೆಂಗಳೂರಿನ ಖಾಸಾಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಿದ್ದರು. ಆದ್ರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ರತ್ನಮ್ಮ ಸಾವನ್ನಪ್ಪಿದ್ದಾರೆ.ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂಗಾರಪೇಟೆ ಠಾಣಾ ವ್ಯಾಪ್ತಿಯಾ ಪೋಲಿಸರು ಭೇಟಿನೀಡಿದ್ದು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ವಶಪಡಿಸಿಕೊಂಡಿದ್ದಾರೆ.
ವರದಿ-ವಿ.ರಾಮಕೃಷ್ಣ ಎಕ್ಸ್ ಪ್ರೆಸ್ ಟಿವಿ ಬಂಗಾರಪೇಟೆ