ಮಂಡ್ಯ

ಎಸ್ಎಸ್ಎಲ್ಸಿ ಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ..!

Published

on

ಮಳವಳ್ಳಿ: ಮಳವಳ್ಳಿ ತಾಲ್ಲೂಕು ಸವಿತಾ ಸಮಾಜ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭವನ್ನು ಮಳವಳ್ಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆಸಲಾಯಿತು. ಮಳವಳ್ಳಿ ಪಟ್ಟಣದ ತಾಲ್ಲೂಕಿನ ಸವಿತಾ ಸಮಾಜ ಅಧ್ಯಕ್ಷರಾದ ರಮೇಶ್ರವರ ಅಧ್ಯಕ್ಷತೆಯಲ್ಲಿ ಸಭೆಯನ್ನು ಸವಿತಾ ಸಮಾಜ ಕಾರ್ಮಿಕ ಇಲಾಖೆಯ ರಾಮದಾಸ್ ಉದ್ಘಾಟಿಸಿದರು. ಇನ್ನೂ ಇದೇ ವೇಳೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಪಡೆದು ರಾಜ್ಯದಲ್ಲಿ ಮೂರನೇ ಸ್ಥಾನ ಪಡೆದ ಸವಿತ ಸಮಾಜದ ಬಾಲಕಿ ಅಮೂಲ್ಯ , ಡಿ.ಎಸ್ ರಾಜೇಶ್, ಹಾಗೂ ಪೂಜಾರವರಿಗೆ ಸನ್ಮಾನ ಕೂಡ ಮಾಡಲಾಯಿತು.ಕಾರ್ಯಕ್ರಮದಲ್ಲಿ ಸಂಘಟನಾ ಕಾರ್ಯದರ್ಶಿ ದೇವರಾಜು, ಜಿಲ್ಲಾ ಮುಖಂಡ ಪ್ರತಾಪ್ ,ಮಂಜು, ಕುನ್ನಯ್ಯ , ಸೇರಿದಂತೆ ಮತ್ತಿತ್ತರರು ಇದ್ದರು.

ವರದಿ : ಎ.ಎನ್ ಲೋಕೇಶ ಎಕ್ಸ್ ಪ್ರೆಸ್ ಟಿವಿ ಮಳವಳ್ಳಿ

Click to comment

Trending

Exit mobile version