ಬೆಂಗಳೂರು : ಎರಡು ವರ್ಷದ ಮಗು ಅಳು ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಅಜ್ಜಿ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಗುರಪ್ಪನಪಾಳ್ಯದಲ್ಲಿ ನಡೆದಿದೆ.ಮಗು ಅಳು ನಿಲ್ಲಸಲಿಲ್ಲ ಹಾಗು ಹೆಚ್ಚು ಊಟ ಮಾಡುತ್ತೆ ಎಂಬ ಕ್ಷುಲ್ಲಕ ಕಾರಣಕ್ಕೆ ಮಗು ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ.ಇಮ್ರಾನ್ ಹಾಗು ಅಜೀರಾ ದಂಪತಿಯ ಪುತ್ರನ ಮೇಲೆ ಹಲ್ಲೆ ನಡೆಸಿರುವ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದ್ದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಮಗುವಿನ ಮೈ ಮೇಲೆ ಸುಟ್ಟಿರುವ ನಿಶಾನೆಗಳು ಕೂಡ ಇದ್ದು,ಸದ್ಯ ಗಂಭೀರವಾಗಿ ಗಾಯಗೊಂಡ ಮಗುವನ್ನು ಇಂದಿರಾ ಗಾಂಧಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಮಗುವಿನ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ ಅಜ್ಜಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ವರದಿ-ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು..