ಶಿರಾ

ಆಯೋಗ ಘೋಷಣೆ ಮುನ್ನವೇ ಬಾಜಪ ಚುನಾವಣೆ ಪ್ರಚಾರ.. !

Published

on

ಶಿರಾ: ಶಿರಾ ಕ್ಷೇತ್ರದ ಶಾಸಕ ಬಿ.ಸತ್ಯ ನಾರಾಯಣ ಅವರ ಸಾವಿನಿಂದ ತೆರವಾದ ಸ್ಥಾನಕ್ಕೆ ಬಾಜಪ ನಾಯಕರು ಈಗಾಗಲೇ ಪ್ರವಾಸ ಕೈಗೊಂಡು ಗ್ರಾಮಗಳಲ್ಲಿ ಬಾಜಪ ಪರ ಚುನಾವಣೆ ಪ್ರಚಾರ ಆರಂವಾಗಿದೆ. ಕ್ಷೇತ್ರದಲ್ಲಿ ಅಭ್ಯರ್ಥಿ ಯಾರು ಎಂದು ಘೋಷಣೆಯಾಗಿಲ್ಲ ಅದರೆ ನಾಯಕರು ಕಳೆದ ಮೂರು ದಿನಗಳಿಂದ ಗ್ರಾಮೀಣ ಪ್ರದೇಶಗಳಲ್ಲಿ ಪ್ರವಾಸ ಕೈಗೊಂಡಿದ್ದಾರೆ.ಸ್ಥಳೀಯ ನಾಯಕರ ಭಿನ್ನಾಬಿಪ್ರಾಯದ ನಡುವೆ ಒಟ್ಟು ಗೂಡಿಸುವ ಪ್ರಯತ್ನ ನಡುವೆ.ಕಾವು ರಂಗೇರುತ್ತಿದೆ ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಸುರೇಶ್ ಗೌಡ ಅವರ ಅಧ್ಯಕ್ಷತೆಯಲ್ಲಿ ಶಿರಾ ತಾಲ್ಲೂಕಿನಲ್ಲಿ ಬೂತ್ ಮಟ್ಟದ ಸಭೆ ಆರಂಭವಾಗಿದ್ದು, ಬಿಜೆಪಿ ಚುನಾವಣೆಗೆ ಸಿದ್ಧತೆ ಆರಂಭಿಸಿದೆ. ವಿಧಾನ ಪರಿಷತ್ ಸದಸ್ಯ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ನೇತೃತ್ವದಲ್ಲಿ ಇಂದು ಶಿರಾ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಬೂತ್ ಮಟ್ಟದ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ ತುಮಕೂರು ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್, ಬಿಜೆಪಿ ಜಿಲ್ಲಾಧ್ಯಕ್ಷ ಮತ್ತು ಮಾಜಿ ಶಾಸಕ ಬಿ.ಸುರೇಶ್ ಗೌಡ ಅವರು ಮಾತನಾಡಿ,ಪಕ್ಷದ ಕಾರ್ಯಕರ್ತರಿಗೆ ಉತ್ತಮ ರೀತಿಯಲ್ಲಿ ಕೆಲಸ ನಿರ್ವಹಿಸಲು ಸೂಚಿಸಿದರು. ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶಾರದಾ ನರಸಿಂಹಮೂರ್ತಿ,ಜಿಲ್ಲಾ ಪದಾಧಿಕಾರಿಗಳು, ಸಿರಾ ನಗರ ಮತ್ತು ಗ್ರಾಮಾಂತರ ಮುಖಂಡರು ಭಾಗವಹಿಸಿದ್ದರು. ಬಿಜೆಪಿ ಸೇರಿದಂತೆ ಯಾವುದೇ ಪಕ್ಷದಿಂದ ಶಿರಾ ಉಪ ಚುನಾವಣೆಯಲ್ಲಿ ಸ್ಫರ್ಧಿಸುವ ಅಭ್ಯರ್ಥಿ ಹೆಸರು ಘೋಷಣೆಯಾಗಿಲ್ಲ. ಕಾಂಗ್ರೆಸ್ ಮತ್ತು ಜೆಡಿಎಸ್ ಇನ್ನೂ ಸಿದ್ಧತೆ ಆರಂಭಿಸಿಲ್ಲ ಆದರೆ ಬಿಜೆಪಿ ಅದಾಗಲೇ ಅಖಾಡಕ್ಕೆ ಇಳಿದಿದ್ದು, ಚುನಾವಣಾ ಸಿದ್ಧತೆ ಆರಂಭಿಸಿದೆ.ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇರುವುದರಿಂದ ಶಿರಾ ಉಪ ಚುನಾವಣೆ ಬಿಜೆಪಿಗೆ ಪ್ರತಿಷ್ಠೆಯಾಗಿದೆ.

ವರದಿ-ಶ್ರೀಮಂತ್ ಎಕ್ಸ್ ಪ್ರೆಸ್ ಟಿವಿ ಶಿರಾ..

Click to comment

Trending

Exit mobile version