ಸಿಂಧನೂರು: ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಗ್ರಾಮೀಣ ಪೋಲಿಸ್ ಠಾಣೆಯ ಪಿ.ಎಸ್. ಐ ರಾಘವೇಂದ್ರ ರವರ ಫೇಸ್ ಬುಕ್ ಹ್ಯಾಕ್ ಮಾಡಿ.ಪಿ.ಎಸ್.ಐ ಅವರ ಹೆಸರಿನಲ್ಲಿ ಆರ್ಥಿಕ ಸಹಾಯ ಕೇಳಿದ ಘಟನೆ ತಿಳಿಯುತ್ತಿದ್ದಂತೆ ಎಚ್ಚೇತ್ತ ಗ್ರಾಮೀಣ ಪೋಲಿಸ್ ಠಾಣೆಯ ಪಿ.ಎಸ್. ಐ ರಾಘವೇಂದ್ರ ಅವರು ಸಾರ್ವಜನಿಕರು ಯಾವುದೇ ಕಾರಣಕ್ಕೂ ಹಣವನ್ನು ಹಾಕಬಾರದು, ಯಾರೋ ಕಿಡಿಗೇಡಿಗಳು ನನ್ನ ಫೇಸ್ ಬುಕ್ ಅಕೌಂಟ್ ಅನ್ನು ಹ್ಯಾಕ್ ಮಾಡಿದ್ದಾರೆಂದು ತಿಳಿಸಿದ್ದಾರೆ.ಇದರ ಬಗ್ಗೆ ದೂರು ನೀಡಿದ್ದು ಶೀಘ್ರವಾಗಿ ಫೇಸ್ ಬುಕ್ ಹ್ಯಾಕ್ ಮಾಡಿದವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
ವರದಿ-ಸೈಯದ್ ಬಂದೇನವಾಜ್ ಎಕ್ಸ್ ಪ್ರೆಸ್ ಟಿವಿ ಸಿಂಧನೂರು