ಹುಬ್ಬಳ್ಳಿ: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಜಾಲ ಪತ್ತೆ ವಿಷಯ ಬೇಸರದ ಸಂಗತಿಯಾಗಿದ್ದು, ಯಾರು ತಪ್ಪು ಮಾಡಿದ್ದಾರೆ ಅಂತವರ ವಿರುದ್ಧ ಕಠಿಣ ಕಾನೂನು ಜರುಗಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು ಅಸಮಾಧಾನ ವ್ಯಕ್ತಪಡಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ ದೇಶದಲ್ಲಿಯೇ ಡ್ರಗ್ಸ್ ವ್ಯಾಪಿಸಿಕೊಂಡಿದ್ದು, ಈ ಬಗ್ಗೆ ಗೃಹ ಸಚಿವರು ಉತ್ತರ ನೀಡುವರು. ಉಪ್ಪು ತಿಂದವರು ನೀರು ಕುಡಿಯಲೇಬೇಕು.ಪೋಲಿಸ್ ಇಲಾಖೆ ಈ ಕುರಿತು ಸೂಕ್ತ ತನಿಖೆ ನಡೆಸುತ್ತಿದೆ. ಈ ಪ್ರಕರಣದಲ್ಲಿ ಯಾರೆ ಭಾಗಿಯಾಗಿದ್ದರು ಅಂತವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದರು..
ವರದಿ-ರಾಜುಮುದುಗಲ್ ಎಕ್ಸ್ ಪ್ರೆಸ್ ಟಿವಿ ಹುಬ್ಬಳ್ಳಿ