ಹುಬ್ಬಳ್ಳಿ- ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ ಅವರ ಪುತ್ರ ಮನೆಯಲ್ಲಿಯೇ ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡಿದ್ದು, ಉಪನಗರ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಸೂರಜ (18) ದೇಶಪಾಂಡೆನಗರದಲ್ಲಿರುವ ತಮ್ಮ ಮನೆಯ ಮೇಲಿನ ಕೋಣೆಯಲ್ಲಿ ನೇಣು ಹಾಕಿಕೊಂಡು ಸಾವಿಗೀಡಾಗಿದ್ದು, ಯಾವ ಕಾರಣಕ್ಕೆ ಇಂತಹ ಕೃತ್ಯಕ್ಕೆ ಯುವಕ ಕೈಹಾಕಿದ್ದಾನೆಂಬುದು ತಿಳಿದಿಲ್ಲ. ಪೂರ್ವ ಮೀಸಲು ಕ್ಷೇತ್ರದ ಶಾಸಕರಾಗಿದ್ದ ವೀರಭದ್ರಪ್ಪ ಹಾಲಹರವಿ ಸಜ್ಜನ ರಾಜಕಾರಣಿ. ಕಳೆದ ಬಾರಿ ಚುನಾವಣೆಯಲ್ಲಿ ಟಿಕೆಟ್ ಸಿಗದೇ ಇದ್ದಾಗಲೂ ಪಕ್ಷದ ಹಿತದೃಷ್ಟಿಯಿಂದಲೇ ಕೆಲಸ ಮಾಡುತ್ತಲೇ ಬಂದವರು. ಆದರೆ, ಅವರ ಪುತ್ರ ಹೀಗೇಕೆ ಮಾಡಿಕೊಂಡ ಎಂಬುದು ಯಕ್ಷಪ್ರಶ್ನೆಯಾಗಿದೆ. ಆತ್ಮಹತ್ಯೆಗೆ ಶರಣಾಗಿರುವ ಸೂರಜ್, ಎಲ್ಲರೊಂದಿಗೆ ಚೆನ್ನಾಗಿಯೇ ಬೆರೆಯುತ್ತಿದ್ದ. ಸದಾಕಾಲ ಲವಲವಿಕೆಯಿಂದ ಇರುತ್ತಿದ್ದನೆಂದು ಹೇಳಲಾಗಿದೆ. ಘಟನೆಯ ಬಗ್ಗೆ ಪೊಲೀಸರು ಸಮಗ್ರವಾದ ತನಿಖೆಯನ್ನ ಮಾಡಲಿದ್ದಾರೆ…
ವರದಿ-ರಾಜುಮುದುಗಲ್ ಎಕ್ಸ್ ಪ್ರೆಸ್ ಟಿವಿ ಹುಬ್ಬಳ್ಳಿ