ಕೋಲಾರ: 35 ವರ್ಷದ ಭೀಮರಾಜ್ ಎಂಬಾತ 28 ವರ್ಷದ ಪತ್ನಿ ಶಾಂತಾಬಾಯಿಯ ಕೈಯನ್ನು ಕುಡಿದ ಅಮಲಿನಲ್ಲಿ ಕತ್ತರಿಸಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಕನುಮನಹಳ್ಳಿಯಲ್ಲಿ ಗ್ರಾಮದಲ್ಲಿ ನಡೆದಿದೆ. ರಾತ್ರಿ ಕಂಠ ಪೂರ್ತಿ ಕುಡಿದು ಬಂದು ಪತ್ನಿ ಜೊತೆ ಗಲಾಟೆ ನಡೆಸಿದ ಪತಿ,ಕುಡಿದ ಅಮಲಿನಲ್ಲಿ ಪತ್ನಿಯ ಕಣ್ಣಿಗೆ ಕಾರದ ಪುಡಿ ಎರಚಿ ಕೈ ಕತ್ತರಿಸಿ ಪೈಶಾಚಿಕ ಕೃತ್ಯ ನಡೆಸಿದ್ದಾನೆ. ಇನ್ನೂ ವಿಚಯ ತಿಳಿಯುತ್ತಿದ್ದಂತೆ ,ಸ್ಥಳಕ್ಕೆ ಕಾಮಸಮುದ್ರ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಆರೋಪಿ ಭೀಮಾರಾವ್ ನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವರದಿ-ಬೆಟ್ಟಪ್ಪ ಎಕ್ಸ್ ಪ್ರೆಸ್ ಟಿವಿ ಕೋಲಾರ..